Home / ಕವನ / ಕವಿತೆ / ಇಷ್ಟೊಂದು ದೊಡ್ಡ ಬಯಲಲ್ಲಿ

ಇಷ್ಟೊಂದು ದೊಡ್ಡ ಬಯಲಲ್ಲಿ

ಇಷ್ಟೊಂದು ದೊಡ್ಡ ಬಯಲಲ್ಲಿ
ನಾನು ಒಂದು ನಕ್ಷತ್ರ ನೀನು
ಒಂದು ನಕ್ಷತ್ರ. ನಾವಿಬ್ಬರೂ
ನಮ್ಮಿಬ್ಬರಿಗೆ ಮಾತ್ರ ಗೊತ್ತು.
ಬೆಳಕನ್ನು ಲಕ್ಕ ಮಾಡೋಣ.
ಮುಕ್ಕಾಲು ಚಂದ್ರನನ್ನು ಎಬ್ಬಿ
ಕಾಫೀ ಬಟ್ಟಲಿಗೆ ಹಾಕಿಕೊ, ತಣ್ಣಗಿರುತ್ತದೆ.

ಇಣುಕಿನೋಡು ಏನೇನು ಕಾಣುತ್ತದೆ-

ತೆಂಗಿನ ಮರಗಳು ಸುಮ್ಮನೆ ನಿಂತಿವೆ.
ಮೀನು ಕಣ್ಣಿನ ಹುಡುಗಿ
ಮಡಕೆಯಲ್ಲಿ ನೀರು ತಂದು
ಮೇಕೆಯ ಜೊತೆಯಲ್ಲಿ ಅಡುತ್ತಿದ್ದಾಳೆ.
ಬಯಲಲ್ಲಿ ಒಂದು ದನ ಮೇಯುತ್ತಿದೆ.
ಸಿಂಹವನ್ನು ಕ೦ಡರೆ ಭಯವೋ
ಚೇಳನ್ನು ಕಂಡರೆ ಭಯವೋ ?

ಚಂದ್ರ ಕರಗಿ ಹೋದನೇನು ನೋಡು.

ಹಸುವಿನಂಥವನು ನಾನು.
ನನ್ನ ಈಜು ಕೊಳಕ್ಕೆ ಬಂದ ಮೀನು
ತನ್ನ ಯಜ್ಞಕ್ಕೆ ನನ್ನ, ಬಲಿ ಏಕೆ ಬಯಸಿದ್ದು?
ಮಾತಿನ ಕುಟುಕಿಗೆ ಹೆದರಿ ನುಣುಚಿಕೊಂಡದ್ದು?

ನಿನ್ನ ಸಾಲದ ಬೆಳೆಕನಲ್ಲಿ ಅವರು ಇವರು
ನನ್ನ ಮುಖ ನೋಡಬೇಕಾಗಿಲ್ಲ.
ನನ್ನ ಸಿಂಹಾಸನಕ್ಕೆ ಮೂವತ್ತೆರಡು ಮೆಟ್ಟಲಿವೆ.
ಒಂದೊಂದು ಮೆಟ್ಟಲಿಗೂ ಒಂದೊಂದು ಬೊಂಬೆ
ನನ್ನ ಒಂದೊಂದು ಕಥೆ ಹೇಳುತ್ತದೆ, ಬಂದು ನೋಡು,
ನನ್ನ ಮನಸ್ಸಿಗೆ ಸಾವಿರ ಮುಖ ಇದೆ,
ಬೆಳಕಿಗೆ ಸಾವಿರ ದಾರಿ ಇದೆ.

ರುಚಿಯಾದ ಮಾತಿನಲ್ಲಿ ನನ್ನ ಕತೆ ಹೇಳಲಾರೆ.
ನಿನ್ನ ಭಾಷೆಯಲ್ಲಿ ನನ್ನ ಅರ್ಥ ನನ್ನ ಇಷ್ಟದ ಹಾಗೇ
ಉಳಿದೀತೇನು ?

ಬೆಳೆಗಿನ ಜಾವದ ರೈಲು ಕೂಗುತ್ತಿದೆ. ನಕ್ಷತ್ರಕ್ಕೂ
ನಕ್ಷತ್ರಕ್ಕೂ ತುಂಬ ದೂರ……….
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...