Home / ಕವನ / ಕವಿತೆ / ಎಲ್ಲೀ ಕಾಣೆ ಎಲ್ಲೀ ಕಾಣೆ

ಎಲ್ಲೀ ಕಾಣೆ ಎಲ್ಲೀ ಕಾಣೆ

ಎಲ್ಲೀ ಕಾಣೆ ಎಲ್ಲೀ ಕಾಣೆ
ಎಲ್ಲಮ್ಮನಂಥಾಕಿನ ಎಲ್ಲೀ ಕಾಣೆ        ||ಪ||

ಎಲ್ಲೀ ಕಾಣೆನು ಶಿವನೊಲ್ಲಭಿ ಎನಿಸಿದಿ
ಕಲ್ಲಿನೊಳಗೆ ಪುಟ್ಟಿ ಉಗುರುಗೊಳ್ಳಕೆ ಇಳದಿ    ||ಅ.ಪ.||

ಬಾಳಮಂದಿ ಬತ್ತಲ ಮಾಡಿದಿ ನೀ ಎಂಥಾಕೆವ್ವಾ
ಬೇವನುಡಿಸಿ ಮೋಜ ನೋಡಿದಿ
ತಾಳ ಜಾಗುಟೆ ಗೆಜ್ಜೆ ನುಡಿಸಿ
ಕಾಲೊಳು ಕಂಚಿನ ಕೊಳಾ ಹಾಕಿ ಕುಣಿಸ್ಯಾಡಿದಿ
ಮ್ಯಾಳಗೊಂಡು ಭಿಕ್ಷೆ ಬೇಡಿಸಿದಿ
ಜೋಲಿಗೆ ಹಾಕಿ ಜೋಗವ್ವೆಂದು ಜನಕ ಕಾಡಿದಿ
ಕಳ್ಳ ಸುಳ್ಳರಿಗೊಲಿದಿ ಕಾಲ ಕರ್ಮವ ಗೆಲಿದಿ
ಭಲೆರೆ ಭಲೆರೆ ಏಳುಕೊಳ್ಳನಾಳುವ ಶರಣೆ        ||೧||

ಬಲ್ಲಿದವರನೆಲ್ಲ ಹಿಡಿದು ಬೆನ್ನಿಲೆ ಸೀಲಿ
ಬಾಯಿಗೆ ಬೀಗ ಜಡಿದು
ಸಲ್ಲು ಸಲ್ಲಿಗೊಮ್ಮೆ ನುಡಿದು
ಉಧೋ ಎಂಬುದೊಳ್ಳೆದವ್ವ ನಿನ್ನ ಬಿರುದು
ಚಲ್ವ ಹೆಂಗಸರ ಶೀರಿ ಸೆಳೆದು
ಚಲ್ಲಣ ತೊಡಿಸಿ ಬುಲ್ಲಿ ತುಂಬಾ ಅರ್ಲ ಜಡಿದು
ಕೋಲುದೀವಟಿಗಿ ಬತ್ತಿ ಮೇಲೆ ಜಗವ ಹೊತ್ತಿ
ಭೂಲೋಕದೊಳು ನಿನ್ನ ಜಾಲಕಿನ್ನೆಣೆಯುಂಟೆ?    ||೨||

ಮಂಡಲದೊಳು ಮಾಯಕಾರ್ತಿ ಜಮದಗ್ನಿಮುನಿಯ
ಚಂಡಕೊರಸಿದ ಮಾಯಕಾರ್ತಿ
ದಂಡು ತಂದು ಗಿರಿಗೆ ಮುತ್ತಿದಿ ಮುನಿಗಳ ಗವಿಗೆ
ಗುಂಡ ಬಡಿದು ಗುಮರಿ ಹಾಕಿದಿ
ಮಿಂಡೇರಂತೆ ನೀರ ತರತಿ ಮಳಲಿನ ಕೊಡಕೆ
ದುಂಡ ಹಾವಿನ ಸಿಂಬಿ ಸುತ್ತಿದಿ
ಗಂಡ-ಹೆಂಡಿರ ಬಿಡಿಸಿ ಭಂಡಾರ ಚೀಲವ ಹೊರಿಸಿ
ರಂಡೀಹುಣ್ಣಿವೆಗಳಿದು ರಾಜಮುತ್ತೈದಿಯಾದೆವ್ವ    ||೩||

ಚಿಕ್ಕ ಮಲಕಿನ ದುರದುಂಡಿ ನೀ ಎಂಥಾಕೆವ್ವಾ
ಚಿಕ್ಕ ಮಗನೊಳು ಕಲಹಗೊಂಡಿ
ಎಕ್ಕಯ್ಯನ ಪ್ರಾಣಗೊಂಡಿ
ಕಕ್ಕಯ್ಯ ಶರಣರಿಗೊಪ್ಪುವಂಥ ರಾಜಮಿಂಡಿ
ಸೊಕ್ಕಿದ ಜನರ ಮನಸ ಕಂಡಿ
ಕಾರಿಕ ಕಾಯಿಕ್ಕಿ ಕರ್ಪುರ ಕಾಣಿಕಗೊಂಡಿ
ದಿಕ್ಕಿನೋಳ್ ಶಿಶುನಾಳ ಮುಕ್ಕಣ್ನನೊಳುಕೂಡಿ
ಅಕ್ಕರದಲಿ ಗುರುನಾಥ ಗೋವಿಂದಗೊಲಿದಿ        ||೪||

*    *    *    *

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...