ಮಾತು ಸುಣ್ಣಾ ಮೌನ ಮಲ್ಲಿಗೆ

ಒಡಕು ಮಸರಿನ ಸಿಡಿದ ಎಸರಿನ
ಶಬ್ಬ ಡಂಗುರ ನಿಲ್ಲಲಿ||

ಉಲಿಯ ನುಲಿಯಲಿ ಬಲಿಯ ನೂಲದೆ
ಶಬ್ದ ಗಂಟೆಯ ಮೀರುವೆ
ತಮಟೆ ಜಾಗಟೆ ಕಾಳಿಭೇರಿಯ
ಶಂಖವಾದ್ಯವ ದಾಟುವೆ

ಮಾತು ಸುಣ್ಣಾ ಮೌನ ಮಲ್ಲಿಗೆ
ಹೂವಿನೆದೆಯಲಿ ಮಲಗುವೆ
ಜಾತ್ರಿ ಬೇಡ ತೇರು ಬೇಡ
ಕಳಸ ಗೋಪುರ ತೊರುವೆ

ಜಡದ ಮಜ್ಜಿಗೆ ಕಡೆದು ತೆಗೆಯುವೆ
ಶಿವನ ಶಾಂತಿಯ ಬೆಣ್ಣೆಯ
ಕಡಲ ಕೋಲಾಹಲದ ಸಂತೆಗೆ
ತರುವೆ ಶಾಂತಿಯ ಮೆಂತೆಯ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಸ್ತುನಿಷ್ಠ ವಿಮರ್ಶೆ
Next post ನಿನಗೆ ಒಂದು ಮಾತು ಹೇಳಬೇಕು

ಸಣ್ಣ ಕತೆ

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…