ಮಾತು ಸುಣ್ಣಾ ಮೌನ ಮಲ್ಲಿಗೆ

ಒಡಕು ಮಸರಿನ ಸಿಡಿದ ಎಸರಿನ
ಶಬ್ಬ ಡಂಗುರ ನಿಲ್ಲಲಿ||

ಉಲಿಯ ನುಲಿಯಲಿ ಬಲಿಯ ನೂಲದೆ
ಶಬ್ದ ಗಂಟೆಯ ಮೀರುವೆ
ತಮಟೆ ಜಾಗಟೆ ಕಾಳಿಭೇರಿಯ
ಶಂಖವಾದ್ಯವ ದಾಟುವೆ

ಮಾತು ಸುಣ್ಣಾ ಮೌನ ಮಲ್ಲಿಗೆ
ಹೂವಿನೆದೆಯಲಿ ಮಲಗುವೆ
ಜಾತ್ರಿ ಬೇಡ ತೇರು ಬೇಡ
ಕಳಸ ಗೋಪುರ ತೊರುವೆ

ಜಡದ ಮಜ್ಜಿಗೆ ಕಡೆದು ತೆಗೆಯುವೆ
ಶಿವನ ಶಾಂತಿಯ ಬೆಣ್ಣೆಯ
ಕಡಲ ಕೋಲಾಹಲದ ಸಂತೆಗೆ
ತರುವೆ ಶಾಂತಿಯ ಮೆಂತೆಯ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಸ್ತುನಿಷ್ಠ ವಿಮರ್ಶೆ
Next post ನಿನಗೆ ಒಂದು ಮಾತು ಹೇಳಬೇಕು

ಸಣ್ಣ ಕತೆ

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…