ಜಗವೇ ಯೋಗಂ ಮಾಧುರ್ಯಂ

ವಿಶ್ವಾತ್ಮನ ಮಠ ಪೀಠಾರೋಹಿಣೆ
ಠೀವಿಯ ಠಾವಿನ ಶಾಂಭವಿಯೆ
ಶಕ್ತಾತ್ಮಳೆ ದಿಟ ಭಟರಾರಾಧನೆ
ಠಿಂ ಠಿಂ ಠೀವಿಯ ವೈಭವಿಯೆ

ಜಗದಂಬಾಂಬೆ ಮಾಯಾಂಗಾರಳೆ
ಉಡಿಯಲಿ ತುಂಬೌ ಮಕ್ಕಳನು
ಚಿದ್ಘನ ತೂರ್ಯೆ ಋಙ್ಞನ ಧಾರ್ಯೆ
ಅಪ್ಪೌ ಮುದ್ದಿನ ಸಿಸುಗಳನು

ನಿನ್ನಯ ಪದತಲ ಋಷಿತಲ ಶಿವನೆಲ
ಬಿತ್ತೌ ಬೆಳಸೌ ಚಿರಸೌಖ್ಯ
ಶಕ್ತಿಯ ಯುಕ್ತಿಯ ಚಿತ್ತಿನ ಚಂದ್ರಳೆ
ಜೀಕಿಸು ಚುಂಬಿಸು ಮಧುಸಖ್ಯ

ಏಕೌ ಹಡೆದಿಹೆ ಏಕೌ ಪಡೆದಿಹೆ
ಏಕೌ ಮರೆದಿಹೆ ಮಕ್ಕಳನು
ಸಾಕೌ ಕಾಡಿಕೆ ಬೇಕೌ ನೀಡಿಕೆ
ತಾರೌ ಸವಿಮೊಲೆ ಚಂದ್ರವನು

ನೀನೌ ಶಿವತನ ಸುಂದರ ಖುಷಿವನ
ಸತ್ಯಂ ನಿತ್ಯಂ ಸೌಂದರ್ಯ೦
ಶಿವಗುಣ ಗಾನಂ ನಿಜಗುಣ ತಾಣಂ
ಜಗವೇ ಯೋಗಂ ಮಾಧುರ್ಯಂ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೆ.ಎಸ್. ನರಸಿಂಹಸ್ವಾಮಿ
Next post ಸ್ವಲ್ಪ ತಡಿ, ಮೋಡ ಹೋಗಲಿ, ಚಂದ್ರ ಬರುತ್ತಾನೆ

ಸಣ್ಣ ಕತೆ

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

cheap jordans|wholesale air max|wholesale jordans|wholesale jewelry|wholesale jerseys