ಬಿಸಿಲ ಕಾಲವು ಬಂದಿತೆ ?

ಎಲೆಯ ಮೇಲೆ ಎಲೆಯು ಉರುಳಿವೆ
ಬಿಸಿಲ ಕಾಲವು ಬಂದಿತೆ

ಹಕ್ಕಿ ಗೂಡು ಒಣಗಿ ಹೋಗಿದೆ
ಮುಗಿಲು ಕೆಂಡವ ಕಾರಿತೆ

ಎಲ್ಲಿ ಹೋಯಿತು ಹಸಿರು ಹೂಬನ
ಎಲ್ಲಿ ಅಡಗಿತು ಕೂಜನ

ಎಲ್ಲಿ ಮುಳುಗಿತು ಮಳೆಯ ಠಂಠಣ
ತಂಪು ಹನಿಗಳ ಸಿಂಚನ

ನೆಲಕೆ ಹೊಲಕೆ ಜಲಕೆ ಸುರಿದಿವೆ
ಬರಿಯ ಬಣಬಣ ಎಲೆಗಳು

ಬೆಂಕಿ ಬಿದ್ದರೆ ಬಗ್ಗನುರಿವವು
ಬಯಲು ಬಾನಿನ ನೆಲೆಗಳು

ಬಣ್ಣ ಬಣ್ಣದ ದಿಡುಗು ಗುಡುಗಿಗೆ
ಕಡೆಗೆ ಬಂದಿತೆ ಈ ಗತಿ

ಯೌವನೋತ್ಸವ ಹರ್ಷಹಾಡಿಗೆ
ಕಡೆಗೆ ತಿರುಗಿತೆ ಈ ಮತಿ
ಮತ್ತೆ ನಗುವಳೆ ವಸುಮತಿಽಽಽಽ
ಮತ್ತೆ ತರುವಳೆ ರಸಗತಿಽಽಽಽ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೀಪಿಕಾ ಸೃಷ್ಟಿ
Next post ಕಾವ್ಯ

ಸಣ್ಣ ಕತೆ

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

cheap jordans|wholesale air max|wholesale jordans|wholesale jewelry|wholesale jerseys