ದುಡಿವ ರಟ್ಟೆಗೆ ಶರಣು ಕೊಡುವ ಹೊಟ್ಟೆಗೆ ಶರಣು!

ದುಡಿವ ರಟ್ಟೆಗೆ ಶರಣು ಕೊಡುವ ಹೊಟ್ಟೆಗೆ ಶರಣು
ಪರರ ಎಂಜಲು ತಿಂಬ ದಾಹಬೇಡ
ಗುರುಬರಲಿ ಹರಬರಲಿ ಶಿವಬರಲಿ ಯಾರಿರಲಿ
ಬೆವರಿಲ್ಲದಾ ಅನ್ನ ಅರುಹು ಬೇಡ
ಶ್ರಮವಿಲ್ಲದಾ ದೇವ ಧರ್ಮಬೇಡಽಽಽಽ

ಗುರುವಿರಲಿ ದೊರೆಯಿರಲಿ ಅರಮನೆಯ ಅರಸಿರಲಿ
ಭೂಮಿತಾಯಿಗೆ ಶರಣು ಶರಣು ಶರಣೋ

ಮಣ್ಣು ಕೂಡಲಸಂಗ ಕಲ್ಲು ಕೂಡಲಸಂಗ
ಬೆವರು ಸುರಿಸಿದ ಜನಕೆ ಶರಣು ಶರಣೋ

ನಿನ್ನ ದೀಕ್ಷೆಗೆ ಶರಣು ನಿನ್ನ ರಕ್ಷೆಗೆ ಶರಣು
ಮಣ್ಣು ಬೆಣ್ಣೆಯ ಗೈದ ಗುರುವೆ ಶರಣು

ಮಣ್ಣು ಜಂಗಮಲಿಂಗ ರಟ್ಟೆ ಕೂಡಲಸಂಗ
ಜಗವೆ ರೈತನ ಗಾನ ಗುಡಿಯು ಶರಣು

ಓಂ ಶರಣು ಕಾಯಕಕೆ ಓಂ ಶರಣು ಕಾಯಕ್ಕೆ
ದುಡಿಮೆಯೆ ಗುರುಲಿಂಗ ನಂಬಿ ಬರಲಿ

ಸಿಕ್ಕಷ್ಟು ಶಿವಭಾವ ಕೊಟ್ಟಷ್ಟು ಗುರುಭಾವ
ಬದುಕೀಗೆ ಶಿವಜ್ಞಾನ ಗಾನ ತರಲಿಽಽಽಽ
*****

ಸ್ಯಾನ್‌ಫ್ರಾನ್ಸಿಸ್ಕೋದಲ್ಲಿ ಬರೆದ ಕರ್ನಾಟಕದ ರೈತ ಸಮಸ್ಯೆಯ ಪ್ರಾಸಂಗಿಕ ಕವನ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಂಡದ್ದು
Next post ಪ್ರಾರ್‍ಥನೆ

ಸಣ್ಣ ಕತೆ

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

cheap jordans|wholesale air max|wholesale jordans|wholesale jewelry|wholesale jerseys