ದುಡಿವ ರಟ್ಟೆಗೆ ಶರಣು ಕೊಡುವ ಹೊಟ್ಟೆಗೆ ಶರಣು!

ದುಡಿವ ರಟ್ಟೆಗೆ ಶರಣು ಕೊಡುವ ಹೊಟ್ಟೆಗೆ ಶರಣು
ಪರರ ಎಂಜಲು ತಿಂಬ ದಾಹಬೇಡ
ಗುರುಬರಲಿ ಹರಬರಲಿ ಶಿವಬರಲಿ ಯಾರಿರಲಿ
ಬೆವರಿಲ್ಲದಾ ಅನ್ನ ಅರುಹು ಬೇಡ
ಶ್ರಮವಿಲ್ಲದಾ ದೇವ ಧರ್ಮಬೇಡಽಽಽಽ

ಗುರುವಿರಲಿ ದೊರೆಯಿರಲಿ ಅರಮನೆಯ ಅರಸಿರಲಿ
ಭೂಮಿತಾಯಿಗೆ ಶರಣು ಶರಣು ಶರಣೋ

ಮಣ್ಣು ಕೂಡಲಸಂಗ ಕಲ್ಲು ಕೂಡಲಸಂಗ
ಬೆವರು ಸುರಿಸಿದ ಜನಕೆ ಶರಣು ಶರಣೋ

ನಿನ್ನ ದೀಕ್ಷೆಗೆ ಶರಣು ನಿನ್ನ ರಕ್ಷೆಗೆ ಶರಣು
ಮಣ್ಣು ಬೆಣ್ಣೆಯ ಗೈದ ಗುರುವೆ ಶರಣು

ಮಣ್ಣು ಜಂಗಮಲಿಂಗ ರಟ್ಟೆ ಕೂಡಲಸಂಗ
ಜಗವೆ ರೈತನ ಗಾನ ಗುಡಿಯು ಶರಣು

ಓಂ ಶರಣು ಕಾಯಕಕೆ ಓಂ ಶರಣು ಕಾಯಕ್ಕೆ
ದುಡಿಮೆಯೆ ಗುರುಲಿಂಗ ನಂಬಿ ಬರಲಿ

ಸಿಕ್ಕಷ್ಟು ಶಿವಭಾವ ಕೊಟ್ಟಷ್ಟು ಗುರುಭಾವ
ಬದುಕೀಗೆ ಶಿವಜ್ಞಾನ ಗಾನ ತರಲಿಽಽಽಽ
*****

ಸ್ಯಾನ್‌ಫ್ರಾನ್ಸಿಸ್ಕೋದಲ್ಲಿ ಬರೆದ ಕರ್ನಾಟಕದ ರೈತ ಸಮಸ್ಯೆಯ ಪ್ರಾಸಂಗಿಕ ಕವನ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಂಡದ್ದು
Next post ಪ್ರಾರ್‍ಥನೆ

ಸಣ್ಣ ಕತೆ

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…