Home / ಲೇಖನ / ಇತರೆ / ಕೃತಕತೆಯಂದ ನೈಜತೆಗೆ

ಕೃತಕತೆಯಂದ ನೈಜತೆಗೆ

ಪ್ರಿಯ ಸಖಿ

ಕ್ಷಿಪ್ರಗತಿಯಲ್ಲಿ ಬದಲಾಗುತ್ತಿರುವ ಜೀವನ ವಿಧಾನದಿಂದ ನಿಧಾನಕ್ಕೆ ನಾವು ನೈಜತೆಯಿಂದ ಕೃತಕತೆಯೆಡೆಗೆ ಮುಖ ಮಾಡಿ ನಡೆಯುತ್ತಿದ್ದೇವೆ. ನಮ್ಮ ಒಂದು ದಿನದ ದಿನಚರಿಯನ್ನು ನಮ್ಮ ನಡವಳಿಕೆ, ಮಾತು ಕೃತಿಗಳನ್ನು ಗಮನಿಸಿದರೆ ನಾವೆಷ್ಟು ಕೃತಕವಾಗುತ್ತಿದ್ದೇವೆ ಎಂದು ತನ್ನಷ್ಟಕ್ಕೇ ಗೋಚರವಾಗುತ್ತಾ ಸಾಗುತ್ತದೆ. ಇಂದು ಆಧುನಿಕ ಮಾನವನ ನಡೆನುಡಿಗಳೆಲ್ಲಾ ವ್ಯವಹಾರಿಕವಾಗಿವೆ. ತನಗೆ ಇಷ್ಟವಿರಲಿ ಬಿಡಲಿ ಕಾರ್ಯಸಾಧನೆಗೆ ಅನಿವಾರ್ಯವೆಂಬಂತೆ ಹಲವಾರು ಮುಖವಾಡಗಳನ್ನು ತೊಟ್ಟುಕೊಂಡು ಬಿಟ್ಟಿದ್ದಾನೆ. ಕೆಲವೊಮ್ಮೆ ತನ್ನ ನಿಜ ಮುಖ ಯಾವುದು? ಮುಖವಾಡ ಯಾವುದು? ಎಂಬುದೇ ಅವನಿಗೆ ಗೊಂದಲವಾಗುವಷ್ಟು ಮುಖವಾಡಗಳು ಇಂದು ಪ್ರಮುಖ ಪಾತ್ರ ವಹಿಸುತ್ತಿವೆ.

ಆದರೆ ಸೂಕ್ಷ್ಮ ವ್ಯಕ್ತಿಯೊಬ್ಬನಿಗೆ ತನ್ನ ನೈಜ ಮುಖ ಸದಾ ಕಾಡುತ್ತಿರುತ್ತದೆ. ನೈಜ, ಸೂಕ್ಷ್ಮ ಭಾವನೆಗಳು ಕೃತಕತೆಯ ದಾಳಿಯಿಂದ ಮನದಾಳದಲ್ಲಿ ಸದಾ ನಲುಗುತ್ತಿರುತ್ತದೆ. ವ್ಯಕ್ತಿ ಹೆಚ್ಚು ಹೆಚ್ಚು ಮಹತ್ವಾಕಾಂಕ್ಷಿ, ಅಹಂಕಾರಿ, ಆಶೆಬುರುಕನಾದಷ್ಟೂ ಅವನ ಈ ಎಲ್ಲಾ ಗುಣಗಳ ಪೂರೈಕೆಗಾಗಿ ತನ್ನ ಸುತ್ತಲೂ ಕೋಟೆಗಳನ್ನು ಕಟ್ಟಿಕೊಳ್ಳುತ್ತಾ ಹೋಗುತ್ತಾನೆ. ಜೊತೆಗೆ ಹೆಚ್ಚು ಮುಖವಾಡಗಳನ್ನು
ತೊಟ್ಟುಕೊಳ್ಳುತ್ತಾ ಸಾಗುತ್ತಾನೆ. ಹಾಗೇ ತಾನು ಹಿರಿಯ, ದೊಡ್ಡವ್ಯಕ್ತಿ, ಪ್ರತಿಭಾವಂತ, ಶ್ರೇಷ್ಟ, ಗೌರವಾನ್ವಿತ ಎಂಬೆಲ್ಲಾ ಭ್ರಮೆಗಳು ತಲೆಯನ್ನು ಹೊಕ್ಕರೆ ಅದನ್ನು ಪೂರೈಸುವ ಸಲುವಾಗಿಯೂ ತಾನಾಗಿಲ್ಲದ್ದರ, ಆದರೆ ತಾನು ಭ್ರಮಿಸಿದ್ದರಂತೆ ಕಾಣಲು ಬಲವಂತಕ್ಕೆ ಮುಖವಾಡಗಳನ್ನು ಹಾಕಿಕೊಂಡು ಪೋಸುಗಳನ್ನು ಕೊಡಲು ಪ್ರಾರಂಭಿಸಿ ಬಿಡುತ್ತಾನೆ.

ಸಖಿ, ಆದರೆ ಇವೆಲ್ಲಾ ಕೃತಕತೆಗಳು, ಮುಖವಾಡಗಳು, ನಾಟಕೀಯತೆಗಳು ಒಂದಿಲೊಮ್ಮೆ ವ್ಯಕ್ತಿಗೋ ಇಡೀ ಮಾನವ ಜನಾಂಗಕ್ಕೋ ಅಸಹ್ಯ ತರಿಸುವುದೇ ಇಲ್ಲವೇ? ಅಂತಹ ಕಾಲ ಬಹಳ ಬೇಗ ಬರಲಿ. ನಾವು ಮತ್ತೆ ನಮ್ಮ ನೈಜತೆಗೆ ಬೆಲೆ ಕೊಡುವಂತಾಗಲಿ, ನೈಸರ್ಗಿಕ ಭಾವನೆಗಳನ್ನು ಅರ್ಧೈಸಿಕೊಳ್ಳುವಂತಾಗಲಿ. ಈ ಎಲ್ಲಾ ಮುಖವಾಡಗಳನ್ನು ವ್ಯವಹಾರಿಕತೆಯನ್ನು ಮೀರಿ ನಮಗೆ ನಾವು ಸತ್ಯವಾಗುತ್ತಾ, ಪಾರದರ್ಶಕವಾಗುತ್ತಾ, ಹೋಗುವುದು ಸಾಧ್ಯವೇ ಇಲ್ಲವೇ? ಆ ದಿಕ್ಕಿನೆಡೆಗೆ ನಡೆದಾದರೂ ನೋಡಬೇಕೆಂಬ ಆಸೆ ಈ ಮನುಕುಲಕ್ಕೆ ಬರಬೇಕಲ್ಲವೇ?

ಹೀಗಾದಾಗ ನಮಗೆ ಯಾವ ಧರ್ಮ, ನೀತಿ, ಕಾನೂನು, ಶಾಸ್ತ್ರಗಳೂ ಬೇಕಿಲ್ಲ. ಏಕೆಂದರೆ ಸೂಕ್ಷ್ಮ ಸಂವೇದನೆಗಳಿಗೆ ಮಿಡಿಯುವ ನಮ್ಮ ಪ್ರಾಮಾಣಿಕ ನೈಜತೆ ಆಗ ನಮ್ಮೊಂದಿಗಿರುತ್ತದೆ. ಮನಸ್ಸೆಂಬ ಮಾನದಂಡ ಜೊತೆಗಿರುವ ವ್ಯಕ್ತಿಗೆ ತಪ್ಪು ಸರಿಗಳನ್ನು ತಾನೇ ನಿರ್ಧರಿಸಬಲ್ಲ ಸ್ಥೈರ್ಯವೂ ಇರುತ್ತದೆ. ಹೀಗಾದಾಗ ಬೇರೆ ಚೌಕಟ್ಟುಗಳೆಲ್ಲಾ ಏಕೆ?

ಸಖಿ, ಈ ವ್ಯವಹಾರದ ಬದುಕಿನಲ್ಲಿ ನಿತ್ಯವೂ ನಲುಗುತ್ತಿರುವ ನಮ್ಮ ನೈಜ ಸೂಕ್ಷ್ಮತೆಗಳನ್ನು ಇನ್ನಾದರೂ ಉಳಿಸಿಕೊಳ್ಳಲು ಪ್ರಯತ್ನಿಸೋಣ, ಬೇರೆ ಬೇರೆ ಸಂಸ್ಕೃತಿಯ ಧಾಳಿಗೆ ಈಡಾಗುವ ಮೊದಲು ನಮ್ಮ ನಮ್ಮ ಮನದ ಸ್ವಧರ್ಮಕ್ಕೆ ಹಿಂತಿರುಗೋಣ. ಅಲ್ಲಿಯೇ ನಮ್ಮ ನಿಜವಾದ ನೆಲೆಗಳಿರುವುದು. ಈ ಬದುಕಿಗೊಂದು ಬೆಲೆಯಿರುವುದು, ಅಲ್ಲವೇ ಸಖಿ ?
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...