Home / ಕವನ / ಕವಿತೆ / ಛೋಟೀವಾಲ

ಛೋಟೀವಾಲ

ಎಲ ಎಲಾ ಛೋಟೀವಾಲ! ಹತ್ತು ಅವತಾರಗಳ–
ನೆತ್ತಿಯೂ ಸಾಲದೆ ಹನ್ನೊಂದನೆಯ ಅವತಾರವ-
ನೆತ್ತಿಬಿಟ್ಟೆಯಲ! ಹುಟ್ವಿಸಿದ ದೇವರು ಯಾರಿಗೂ
ಹುಲ್ಲು ಮೇಯಿಸನಯ್ಯ ಒಂದೊಂದು ಜೀವಕೂ
ಬದುಕುವ ಒಂದೊಂದು ಉಪಾಯವನವನು
ಕರುಣಿಸುವನಯ್ಯ! ಕೆಲವರನು ಕುಣಿಸುವನು
ಕೆಲವರನು ಮಣಿಸುವನು ಕೆಲವರನು ಪಲ್ಲಂಗದಲ್ಲಿ
ಕೂರಿಸುವನು ಕೆಲವರನು ಬಿಸಿಲಲಿ ನಿಲ್ಲಿಸುವನು

ಇನ್ನು ಕೆಲವರಿಗೆ ಅಡಿಯಿಂದ ಮುಡಿವರೆಗೆ
ಬಣ್ಣವ ಹಚ್ಚಿ ಮೇಲೆಲ್ಲ ಅಭ್ರಕದ ಹುಡಿ ಅರಚಿ
ತಲೆಯ ಶಿಖರದಲ್ಲಿ ಮಯಣದಲೊತ್ತಿ ತಿರುವಿದ ಜುಟ್ಟು
ಕೈಯ ಕೆಳಗೊಂದು ದಂಡವನಿಟ್ಟು ಬಿಟ್ಟು
ಕುಳಿತುಕೊಳ್ಳಿಸುವನು ಖಾನಾವಳಿಯ ಮುಂದೆ-ಇಲ್ಲ
ಹುಲ್ಲ ಮೇಯಿಸನಯ್ಯ ನೆಲ್ಲನೂ ಮೇಯಸನು
ಸಂಜೆ ವೇಳೆಗೆ ಕರುಣಿಸುವನು ದಿನದ ಪಗಾರ
ದಾಟಲು ಸಂಸಾರ ಸಾಗರದ ನಿತ್ಯ ಅಪರಂಪಾರ

ಎಲ ಎಲಾ ಛೋಟೀವಾಲ! ಏನಿದು ಜೀವಜಾಲ!
ಅವಧೂತನೆ ದೇವರ ಅತಿಕೊನೆಯ ದೂತನೆ
ಮಹಾತ್ಮನೆ ಸಾಕ್ಷಾತ್ ಪರಮಾತ್ಮನೆ ನಮಸ್ಕಾರ
ದಾಟಿಸುವೆಯ ನನ್ನ ಗಂಗಾನದಿಯ ಪಾರ?
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...