ಅಲಾವಿಗೆ ಐಸೂರ‍್ಯಾತಕೋ

ಅಲಾವಿಗೆ ಐಸೂರ‍್ಯಾತಕೋ         ||ಪ||

ಐಸುರ ಯಾಕಾತಕೋ ಹೇಸಿ ಮೋರುಮ ಸಾಕು
ವಾಸುಮತಿಗೆ ಹೆಸರಾದ ಅಲಾವಿಗೆ    ||೧ ||

ಕಾಲ ಕೆಸರಿನೊಳು ತುಳಿದು ತುಳಿದು ಜನ
ಸಾಲಬಳ್ಳಿ ಹಿಡಿದಾಡು ಅಲಾವಿಗೆ     ||೨||

ಬಣ್ಣದ ಲಾಡಿಯ ಹಾಕಿ ಮೆರೆಯುವ ಜನ
ಪುಣ್ಯ ಪಾಪ ಎರಡಿಲ್ಲದಲಾವಿಗೆ    ||೩||

ಮುಲ್ಲಾ ಮಸೀದ್ಯಾಗ ಬೆಲ್ಲ ಓದಕಿಮಾಡಿ
ಸಲ್ಲು ಸಲ್ಲಿಗೆ ಧೀನೆಂಬ ಅಲಾವಿಗೆ  ||೪ ||

ಕಡಿದು ಕರ್ಬಲ ಕತ್ತಲ ಶಹಾದತ್ತು
ಒಡಿಯ ಶಿಶುನಾಳಧೀಶನಲಾವಿಗೆ || ೫ ||

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಾಟಕದಲ್ಲೊಂದು ಪುಟ್ಟ ಪಾತ್ರ
Next post ಮಹಾನದಿ ತೀರದಲ್ಲಿ………..

ಸಣ್ಣ ಕತೆ

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…