Home / ಲೇಖನ / ಇತರೆ / ದೀರ್ಘಾಯುಷ್ಯದ ಗುಟ್ಟು

ದೀರ್ಘಾಯುಷ್ಯದ ಗುಟ್ಟು

ನೀವು ನೂರು ವರ್‍ಷ ಬಾಳಬೇಕೆನ್ನುವಿರಾ? ಹಾಘಾದರೆ, ನೂರು ವರ್‍ಷ ಬಾಳಬೇಕೆನುವವರಿಗೆ ನೂರು ವರ್‍ಷ ಬಾಳಿದ ಡಾ || ಎಂ ವಿಶ್ವೇಶ್ವರಯ್ಯ (೧೫-೦೯-೧೮೬೦-೧೯೬೦) ರವರ ಕೆಲ ಸಲಹೆಗಳಿವೆ. ಅವು:

೧) ನಿಮ್ಮ ಮನಸಾಕ್ಷಿಯನ್ನು ಪೀಡಿಸಿ ಕ್ಷಯಿಸುವಂಥ ಕೆಲಸಗಳನ್ನು ಮಾಡಬೇಡಿರಿ. ಕೊರೆಯುವ ಮನಸಾಕ್ಷಿಯ ಮೂಲಕವೇ ಬಹಳ ಜನರ ಆರೋಗ್ಯ ಕೆಟ್ಟು ಅವರು ವೃದ್ಧರಾಗುತ್ತಾರೆ.

೨) ಉಲ್ಲಾಸಚಿತ್ತರಾಗಿರುವ ಅಭ್ಯಾಸವನ್ನು ರೂಢಿಸಿಕೊಳ್ಳಿರಿ. ಉಲ್ಲಾಸವು ಮುದುಕನಲ್ಲಿರುವ ತಾರುಣ್ಯಕ್ಕೆ ಸಾಕ್ಷಿಯಾಗಿರುತ್ತದೆ.

೩) ಅಗತ್ಯವಿರುವಷ್ಟೇ ತಿನ್ನಿರಿ; ಪೌಷ್ಠಿಕ ಅನ್ನವನ್ನಲ್ಲದೆ ವಿಷಯುಕ್ತವಾದ ಮಿಠಾಯಿಗಳನ್ನು ಖಂಡಿತಾ ತಿನ್ನಬೇಡಿರಿ.

೪) ಪ್ರತಿ ೨೪ ತಾಸುಗಳಲ್ಲಿಯೂ ನಿಯಮಿತವಾಗಿ ಒಂದಿಷ್ಟು ತಾಸು ಎಂದು ನಿಶ್ಚಯಿಸಿಕೊಂಡು ನಿದ್ದೆ ಮಾಡಿರಿ. ನಾಳೆ ಮಾಡಿದರಾಯಿತು ಎಂದು ಇಂದಿನ ನಿದ್ದೆಯನ್ನು ಕೆಡಿಸಿಕೊಳ್ಳುವ ಚಟಕ್ಕೆ ತುತಾಗಬೇಡಿರಿ.

೪) ವಿನೋದದಲ್ಲಿ ಕಾಲ ಕಳೆಯಿರಿ. ವಿನೋದ ಎಂದರೆ ಕ್ರಿಕೆಟ್ ಅಥವಾ ಗೋಲ್ಫ್ (ಒಂದು ತರದ ಆಟ)ಗಳಲ್ಲ! ಏಕೆಂದರೆ ಈ ಆಟಗಳೂ ಕೂಡ ಒಂದು ಬಗೆಯ ಕೆಲಸವೇ ಅಗಿವೆ. ಇದಕ್ಕಿಂತಲೂ ಸರಳವಾದ ಮಕ್ಕಳೊಂದಿಗೆ ಚಿನ್ನಾಟವಾಡುವಂಥ ವಿನೋದಗಳಲ್ಲಿ ಕಾಲಕಳೆಯಿರಿ.

೬) ನಿಮ್ಮ ಉತ್ಪನ್ನದ ಮಿತಿಯಲ್ಲಿ ಜೀವನ ಸಾಗಿಸಿರಿ. ನಿಮ್ಮ ಸಂತೋಷ ಪ್ರಾಪ್ತಿಗೆ ಒಂದು ಧ್ಯೇಯ ಇತರರಿಗೆ ಲಾಭದಾಯಕವಾಗುವಂತಿರಲಿ.

೭) ದಿನಂಪ್ರತಿ ಇಂತಿಷ್ಟು ಸಮಯ ಎಂದು ನಿರ್‍ಧರಿಸಿ ತಪ್ಪದೇ ವ್ಯಾಯಾಮ ಮಾಡಿರಿ.

೮) ಬೀಡಿ, ಸಿಗರೇಟು, ಗಾಂಜಾ ಮಧ್ಯ ಇಂಥ ಯಾವ ಆರೋಗ್ಯ ವಿಘಾತಕ ಕೆಟ್ಟ ವ್ಯಸನಗಳನ್ನು ರೂಢಿಸಿಕೊಳ್ಳಬೇಡಿರಿ. ಇವುಗಳಿಂದ ಸಂಪೂರ್‍ಣವಾಘಿ ದೂರವಿರಿ.

ವಿಶ್ವೇಶ್ವರಯ್ಯನವರು ಮೇಲೆ ಹೇಳಿದ ೮ ಸುಸೂತ್ರಗಳನ್ನು ಚೆನ್ನಾಗಿ ನೆನಪಿಟ್ಟು ತಪ್ಪದೇ ಪಾಲಿಸಿರಿ. ಆಗ ನೀವು ದೀರ್ಘಾಯುಷಿಯಾಗಲು ಸಂದೇಹವೇ ಇಲ್ಲ.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್‍ ಚಂದ್ರ