Home / ಲೇಖನ / ಇತರೆ / ದೀರ್ಘಾಯುಷ್ಯದ ಗುಟ್ಟು

ದೀರ್ಘಾಯುಷ್ಯದ ಗುಟ್ಟು

ನೀವು ನೂರು ವರ್‍ಷ ಬಾಳಬೇಕೆನ್ನುವಿರಾ? ಹಾಘಾದರೆ, ನೂರು ವರ್‍ಷ ಬಾಳಬೇಕೆನುವವರಿಗೆ ನೂರು ವರ್‍ಷ ಬಾಳಿದ ಡಾ || ಎಂ ವಿಶ್ವೇಶ್ವರಯ್ಯ (೧೫-೦೯-೧೮೬೦-೧೯೬೦) ರವರ ಕೆಲ ಸಲಹೆಗಳಿವೆ. ಅವು:

೧) ನಿಮ್ಮ ಮನಸಾಕ್ಷಿಯನ್ನು ಪೀಡಿಸಿ ಕ್ಷಯಿಸುವಂಥ ಕೆಲಸಗಳನ್ನು ಮಾಡಬೇಡಿರಿ. ಕೊರೆಯುವ ಮನಸಾಕ್ಷಿಯ ಮೂಲಕವೇ ಬಹಳ ಜನರ ಆರೋಗ್ಯ ಕೆಟ್ಟು ಅವರು ವೃದ್ಧರಾಗುತ್ತಾರೆ.

೨) ಉಲ್ಲಾಸಚಿತ್ತರಾಗಿರುವ ಅಭ್ಯಾಸವನ್ನು ರೂಢಿಸಿಕೊಳ್ಳಿರಿ. ಉಲ್ಲಾಸವು ಮುದುಕನಲ್ಲಿರುವ ತಾರುಣ್ಯಕ್ಕೆ ಸಾಕ್ಷಿಯಾಗಿರುತ್ತದೆ.

೩) ಅಗತ್ಯವಿರುವಷ್ಟೇ ತಿನ್ನಿರಿ; ಪೌಷ್ಠಿಕ ಅನ್ನವನ್ನಲ್ಲದೆ ವಿಷಯುಕ್ತವಾದ ಮಿಠಾಯಿಗಳನ್ನು ಖಂಡಿತಾ ತಿನ್ನಬೇಡಿರಿ.

೪) ಪ್ರತಿ ೨೪ ತಾಸುಗಳಲ್ಲಿಯೂ ನಿಯಮಿತವಾಗಿ ಒಂದಿಷ್ಟು ತಾಸು ಎಂದು ನಿಶ್ಚಯಿಸಿಕೊಂಡು ನಿದ್ದೆ ಮಾಡಿರಿ. ನಾಳೆ ಮಾಡಿದರಾಯಿತು ಎಂದು ಇಂದಿನ ನಿದ್ದೆಯನ್ನು ಕೆಡಿಸಿಕೊಳ್ಳುವ ಚಟಕ್ಕೆ ತುತಾಗಬೇಡಿರಿ.

೪) ವಿನೋದದಲ್ಲಿ ಕಾಲ ಕಳೆಯಿರಿ. ವಿನೋದ ಎಂದರೆ ಕ್ರಿಕೆಟ್ ಅಥವಾ ಗೋಲ್ಫ್ (ಒಂದು ತರದ ಆಟ)ಗಳಲ್ಲ! ಏಕೆಂದರೆ ಈ ಆಟಗಳೂ ಕೂಡ ಒಂದು ಬಗೆಯ ಕೆಲಸವೇ ಅಗಿವೆ. ಇದಕ್ಕಿಂತಲೂ ಸರಳವಾದ ಮಕ್ಕಳೊಂದಿಗೆ ಚಿನ್ನಾಟವಾಡುವಂಥ ವಿನೋದಗಳಲ್ಲಿ ಕಾಲಕಳೆಯಿರಿ.

೬) ನಿಮ್ಮ ಉತ್ಪನ್ನದ ಮಿತಿಯಲ್ಲಿ ಜೀವನ ಸಾಗಿಸಿರಿ. ನಿಮ್ಮ ಸಂತೋಷ ಪ್ರಾಪ್ತಿಗೆ ಒಂದು ಧ್ಯೇಯ ಇತರರಿಗೆ ಲಾಭದಾಯಕವಾಗುವಂತಿರಲಿ.

೭) ದಿನಂಪ್ರತಿ ಇಂತಿಷ್ಟು ಸಮಯ ಎಂದು ನಿರ್‍ಧರಿಸಿ ತಪ್ಪದೇ ವ್ಯಾಯಾಮ ಮಾಡಿರಿ.

೮) ಬೀಡಿ, ಸಿಗರೇಟು, ಗಾಂಜಾ ಮಧ್ಯ ಇಂಥ ಯಾವ ಆರೋಗ್ಯ ವಿಘಾತಕ ಕೆಟ್ಟ ವ್ಯಸನಗಳನ್ನು ರೂಢಿಸಿಕೊಳ್ಳಬೇಡಿರಿ. ಇವುಗಳಿಂದ ಸಂಪೂರ್‍ಣವಾಘಿ ದೂರವಿರಿ.

ವಿಶ್ವೇಶ್ವರಯ್ಯನವರು ಮೇಲೆ ಹೇಳಿದ ೮ ಸುಸೂತ್ರಗಳನ್ನು ಚೆನ್ನಾಗಿ ನೆನಪಿಟ್ಟು ತಪ್ಪದೇ ಪಾಲಿಸಿರಿ. ಆಗ ನೀವು ದೀರ್ಘಾಯುಷಿಯಾಗಲು ಸಂದೇಹವೇ ಇಲ್ಲ.
*****

Tagged:

Leave a Reply

Your email address will not be published. Required fields are marked *

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...