Home / ಲೇಖನ / ವಿಜ್ಞಾನ / ಅಪಾಯದ ಕರೆ ಗಂಟೆ ಹೊಡೆಯುವ ಸೇಪ್ಟಿಸೂಟ್

ಅಪಾಯದ ಕರೆ ಗಂಟೆ ಹೊಡೆಯುವ ಸೇಪ್ಟಿಸೂಟ್

ಅಪಾಯದ ಕಾರ್ಖಾನೆ, ಅಣು ವಿದ್ಯುತ್ ಕೇಂದ್ರ ಮತ್ತು ಅನಿಲಯುಕ್ತ ಕೇಂದ್ರಗಳಲ್ಲಿ ಕೆಲಸ ಮಾಡುವುದು ಮೈತುಂಬ ಎಚ್ಚರಿಕೆಯನ್ನಿಟ್ಟುಕೊಂಡೇ ಮಾಡಬೇಕಾಗುತ್ತದೆ. ಅನಿರೀಕ್ಷಿತವಾಗಿ ಬೆಂಕಿ ತಗಲುವುದು. ಕೈ ಕಾಲುಗಳಿಗೆ ಜಖಂ ಆಗುವುದು. ಇತ್ಯಾದಿ ಅಪಾಯಗಳಾಗುತ್ತಲೇ ಇರುತ್ತದೆ. ಇಂಥಹ ಸ್ಥಳಗಳಲ್ಲಿ ಕೆಲಸ ಮಾಡುವ ಜನರಿಗಾಗಿ ಅಪಾಯ ರಹಿತ ಮತ್ತು ಅಪಾಯದ ಎಚ್ಚರಿಕೆಯನ್ನು ನೀಡುವ ಸೇಷ್ಟಿಸೂಟ್‌ಗಳು ರಚನೆಯಾಗಿವೆ.

ಇಂಥಹ ವಸ್ತ್ರಗಳನ್ನು ಅಮೇರಿಕಾದ ನ್ಯೂಮೆಕ್ಸಿಕೋದಲ್ಲಿರುವ ‘ಲಾಸ್ ಆಲಾಮೋಸ್’ ರಾಷ್ಟ್ರೀಯ ಪ್ರಯೋಗಶಾಲೆ ತಯಾರಿಸುತ್ತದೆ. ಮತ್ತು ಈ ಸೂಟ್‌ಗೆ ಪೆಟೆಂಟ್ ಸಹ ದೂರೆತಿದೆ. ಅಪಾಯಕಾರಿ ಪರಿಸ್ಥಿತಿಯಲ್ಲಿ ಈ ವಸ್ತ್ರದಲ್ಲಿರುವ ವಿಶೇಷ ವಿದ್ಯುತ್ ವಾಹಕಗಳು ತಕ್ಷಣ ಪ್ರೇರಿತವಾಗಿ ಅಪಾಯದ ಕರೆಗಂಟೆಯನ್ನು ಬಾರಿಸುತ್ತವೆ. ವಿವಿಧ ವಿಕಿರಣಗಳು, ವಿಷಾನಿಲಗಳು, ಜೈವಿಕ ಅನಿಲಗಳು ಇತ್ಯಾದಿಗಳನ್ನು ಇದು ತಡೆದು ಹಿಡಿಯುತ್ತವೆ. ಈ ಕಾರಣವಾಗಿ ಇಲ್ಲಿಯ ಕೆಲಸಗಾರರು ಭಯವಿಲ್ಲದೇ ಉತ್ಪಾದನೆಯನ್ನು ಮಾಡಬಹುದು. ಈ ಕಡೆ ಮನೆಯಲ್ಲಿ ಹೆಂಗಸರಿಗೂ ನೆಮ್ಮದಿ ಕೂಡ.

ಮೊದಲು ಪಾಲಿವಿನೈಲ ಆಲ್ಕೋಹಾಲ್ ಮತ್ತು ಉಪ್ಪುಗಳನ್ನು ಗ್ಲಿಸರಾಲ್‌ನಲ್ಲಿ ಕರಗಿಸಿ ಅರೆವಾಹಕ ಘನ ಪದಾರ್ಥಗಳನ್ನು ತಯಾರಿಸಲಾಗುತ್ತದೆ. ಇದಕ್ಕೆ ವಿದ್ಯುತ್ ವಾಹಕ ಪಾಲಿಮರ್ ಪದಾರ್ಥದ ಪದರವನ್ನು ಕೊಡಲಾಗುತ್ತದೆ. ಹೀಗೆ ತಯಾರಾದ ಬಟ್ಟೆಯಿಂದ ಸೂಟ್‌ಗಳನ್ನು ಹೊಲೆಯಲಾಗುತ್ತದೆ. ವಾಹಕ ಪದರನಲ್ಲಿ ವಿದ್ಯುತ್ ತಂತಿಯ ಸಂಪರ್ಕವಿರುತ್ತದೆ. ಅಪಾಯಕಾರಿ ಪರಿಸರವಿದ್ದಾಗ ವಿದ್ಯುತ್ ಮಂಡಲ ಪೂರ್ಣವಾಗಿ ಅಪಾಯದ ಗಂಟೆಯನ್ನು ಬಾರಿಸುತ್ತದೆ. ಈ ದಿಸೆಯಲ್ಲಿ ಅಲ್ಲಿಯ ಕಾರ್ಖಾನೆಗಳ ಕೆಲಸಗಾರರಿಗೆ ನೆಮ್ಮದಿ ಇದೆ. ಪರಿಸರ ಮಾಲಿನ್ಯದ ತೊಂದರೆ ಇರದೇ ಈ ಕೆಲಸಗಳಿಗೆ ಬಹಳೇ ‘ಡಿಮ್ಯಾಂಡ’ ಕೂಡ ಇದೆ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...