Home / ಲೇಖನ / ವಿಜ್ಞಾನ / ಅಪಾಯದ ಕರೆ ಗಂಟೆ ಹೊಡೆಯುವ ಸೇಪ್ಟಿಸೂಟ್

ಅಪಾಯದ ಕರೆ ಗಂಟೆ ಹೊಡೆಯುವ ಸೇಪ್ಟಿಸೂಟ್

ಅಪಾಯದ ಕಾರ್ಖಾನೆ, ಅಣು ವಿದ್ಯುತ್ ಕೇಂದ್ರ ಮತ್ತು ಅನಿಲಯುಕ್ತ ಕೇಂದ್ರಗಳಲ್ಲಿ ಕೆಲಸ ಮಾಡುವುದು ಮೈತುಂಬ ಎಚ್ಚರಿಕೆಯನ್ನಿಟ್ಟುಕೊಂಡೇ ಮಾಡಬೇಕಾಗುತ್ತದೆ. ಅನಿರೀಕ್ಷಿತವಾಗಿ ಬೆಂಕಿ ತಗಲುವುದು. ಕೈ ಕಾಲುಗಳಿಗೆ ಜಖಂ ಆಗುವುದು. ಇತ್ಯಾದಿ ಅಪಾಯಗಳಾಗುತ್ತಲೇ ಇರುತ್ತದೆ. ಇಂಥಹ ಸ್ಥಳಗಳಲ್ಲಿ ಕೆಲಸ ಮಾಡುವ ಜನರಿಗಾಗಿ ಅಪಾಯ ರಹಿತ ಮತ್ತು ಅಪಾಯದ ಎಚ್ಚರಿಕೆಯನ್ನು ನೀಡುವ ಸೇಷ್ಟಿಸೂಟ್‌ಗಳು ರಚನೆಯಾಗಿವೆ.

ಇಂಥಹ ವಸ್ತ್ರಗಳನ್ನು ಅಮೇರಿಕಾದ ನ್ಯೂಮೆಕ್ಸಿಕೋದಲ್ಲಿರುವ ‘ಲಾಸ್ ಆಲಾಮೋಸ್’ ರಾಷ್ಟ್ರೀಯ ಪ್ರಯೋಗಶಾಲೆ ತಯಾರಿಸುತ್ತದೆ. ಮತ್ತು ಈ ಸೂಟ್‌ಗೆ ಪೆಟೆಂಟ್ ಸಹ ದೂರೆತಿದೆ. ಅಪಾಯಕಾರಿ ಪರಿಸ್ಥಿತಿಯಲ್ಲಿ ಈ ವಸ್ತ್ರದಲ್ಲಿರುವ ವಿಶೇಷ ವಿದ್ಯುತ್ ವಾಹಕಗಳು ತಕ್ಷಣ ಪ್ರೇರಿತವಾಗಿ ಅಪಾಯದ ಕರೆಗಂಟೆಯನ್ನು ಬಾರಿಸುತ್ತವೆ. ವಿವಿಧ ವಿಕಿರಣಗಳು, ವಿಷಾನಿಲಗಳು, ಜೈವಿಕ ಅನಿಲಗಳು ಇತ್ಯಾದಿಗಳನ್ನು ಇದು ತಡೆದು ಹಿಡಿಯುತ್ತವೆ. ಈ ಕಾರಣವಾಗಿ ಇಲ್ಲಿಯ ಕೆಲಸಗಾರರು ಭಯವಿಲ್ಲದೇ ಉತ್ಪಾದನೆಯನ್ನು ಮಾಡಬಹುದು. ಈ ಕಡೆ ಮನೆಯಲ್ಲಿ ಹೆಂಗಸರಿಗೂ ನೆಮ್ಮದಿ ಕೂಡ.

ಮೊದಲು ಪಾಲಿವಿನೈಲ ಆಲ್ಕೋಹಾಲ್ ಮತ್ತು ಉಪ್ಪುಗಳನ್ನು ಗ್ಲಿಸರಾಲ್‌ನಲ್ಲಿ ಕರಗಿಸಿ ಅರೆವಾಹಕ ಘನ ಪದಾರ್ಥಗಳನ್ನು ತಯಾರಿಸಲಾಗುತ್ತದೆ. ಇದಕ್ಕೆ ವಿದ್ಯುತ್ ವಾಹಕ ಪಾಲಿಮರ್ ಪದಾರ್ಥದ ಪದರವನ್ನು ಕೊಡಲಾಗುತ್ತದೆ. ಹೀಗೆ ತಯಾರಾದ ಬಟ್ಟೆಯಿಂದ ಸೂಟ್‌ಗಳನ್ನು ಹೊಲೆಯಲಾಗುತ್ತದೆ. ವಾಹಕ ಪದರನಲ್ಲಿ ವಿದ್ಯುತ್ ತಂತಿಯ ಸಂಪರ್ಕವಿರುತ್ತದೆ. ಅಪಾಯಕಾರಿ ಪರಿಸರವಿದ್ದಾಗ ವಿದ್ಯುತ್ ಮಂಡಲ ಪೂರ್ಣವಾಗಿ ಅಪಾಯದ ಗಂಟೆಯನ್ನು ಬಾರಿಸುತ್ತದೆ. ಈ ದಿಸೆಯಲ್ಲಿ ಅಲ್ಲಿಯ ಕಾರ್ಖಾನೆಗಳ ಕೆಲಸಗಾರರಿಗೆ ನೆಮ್ಮದಿ ಇದೆ. ಪರಿಸರ ಮಾಲಿನ್ಯದ ತೊಂದರೆ ಇರದೇ ಈ ಕೆಲಸಗಳಿಗೆ ಬಹಳೇ ‘ಡಿಮ್ಯಾಂಡ’ ಕೂಡ ಇದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...