Home / ಲೇಖನ / ವಿಜ್ಞಾನ / ಅಪಾಯದ ಕರೆ ಗಂಟೆ ಹೊಡೆಯುವ ಸೇಪ್ಟಿಸೂಟ್

ಅಪಾಯದ ಕರೆ ಗಂಟೆ ಹೊಡೆಯುವ ಸೇಪ್ಟಿಸೂಟ್

ಅಪಾಯದ ಕಾರ್ಖಾನೆ, ಅಣು ವಿದ್ಯುತ್ ಕೇಂದ್ರ ಮತ್ತು ಅನಿಲಯುಕ್ತ ಕೇಂದ್ರಗಳಲ್ಲಿ ಕೆಲಸ ಮಾಡುವುದು ಮೈತುಂಬ ಎಚ್ಚರಿಕೆಯನ್ನಿಟ್ಟುಕೊಂಡೇ ಮಾಡಬೇಕಾಗುತ್ತದೆ. ಅನಿರೀಕ್ಷಿತವಾಗಿ ಬೆಂಕಿ ತಗಲುವುದು. ಕೈ ಕಾಲುಗಳಿಗೆ ಜಖಂ ಆಗುವುದು. ಇತ್ಯಾದಿ ಅಪಾಯಗಳಾಗುತ್ತಲೇ ಇರುತ್ತದೆ. ಇಂಥಹ ಸ್ಥಳಗಳಲ್ಲಿ ಕೆಲಸ ಮಾಡುವ ಜನರಿಗಾಗಿ ಅಪಾಯ ರಹಿತ ಮತ್ತು ಅಪಾಯದ ಎಚ್ಚರಿಕೆಯನ್ನು ನೀಡುವ ಸೇಷ್ಟಿಸೂಟ್‌ಗಳು ರಚನೆಯಾಗಿವೆ.

ಇಂಥಹ ವಸ್ತ್ರಗಳನ್ನು ಅಮೇರಿಕಾದ ನ್ಯೂಮೆಕ್ಸಿಕೋದಲ್ಲಿರುವ ‘ಲಾಸ್ ಆಲಾಮೋಸ್’ ರಾಷ್ಟ್ರೀಯ ಪ್ರಯೋಗಶಾಲೆ ತಯಾರಿಸುತ್ತದೆ. ಮತ್ತು ಈ ಸೂಟ್‌ಗೆ ಪೆಟೆಂಟ್ ಸಹ ದೂರೆತಿದೆ. ಅಪಾಯಕಾರಿ ಪರಿಸ್ಥಿತಿಯಲ್ಲಿ ಈ ವಸ್ತ್ರದಲ್ಲಿರುವ ವಿಶೇಷ ವಿದ್ಯುತ್ ವಾಹಕಗಳು ತಕ್ಷಣ ಪ್ರೇರಿತವಾಗಿ ಅಪಾಯದ ಕರೆಗಂಟೆಯನ್ನು ಬಾರಿಸುತ್ತವೆ. ವಿವಿಧ ವಿಕಿರಣಗಳು, ವಿಷಾನಿಲಗಳು, ಜೈವಿಕ ಅನಿಲಗಳು ಇತ್ಯಾದಿಗಳನ್ನು ಇದು ತಡೆದು ಹಿಡಿಯುತ್ತವೆ. ಈ ಕಾರಣವಾಗಿ ಇಲ್ಲಿಯ ಕೆಲಸಗಾರರು ಭಯವಿಲ್ಲದೇ ಉತ್ಪಾದನೆಯನ್ನು ಮಾಡಬಹುದು. ಈ ಕಡೆ ಮನೆಯಲ್ಲಿ ಹೆಂಗಸರಿಗೂ ನೆಮ್ಮದಿ ಕೂಡ.

ಮೊದಲು ಪಾಲಿವಿನೈಲ ಆಲ್ಕೋಹಾಲ್ ಮತ್ತು ಉಪ್ಪುಗಳನ್ನು ಗ್ಲಿಸರಾಲ್‌ನಲ್ಲಿ ಕರಗಿಸಿ ಅರೆವಾಹಕ ಘನ ಪದಾರ್ಥಗಳನ್ನು ತಯಾರಿಸಲಾಗುತ್ತದೆ. ಇದಕ್ಕೆ ವಿದ್ಯುತ್ ವಾಹಕ ಪಾಲಿಮರ್ ಪದಾರ್ಥದ ಪದರವನ್ನು ಕೊಡಲಾಗುತ್ತದೆ. ಹೀಗೆ ತಯಾರಾದ ಬಟ್ಟೆಯಿಂದ ಸೂಟ್‌ಗಳನ್ನು ಹೊಲೆಯಲಾಗುತ್ತದೆ. ವಾಹಕ ಪದರನಲ್ಲಿ ವಿದ್ಯುತ್ ತಂತಿಯ ಸಂಪರ್ಕವಿರುತ್ತದೆ. ಅಪಾಯಕಾರಿ ಪರಿಸರವಿದ್ದಾಗ ವಿದ್ಯುತ್ ಮಂಡಲ ಪೂರ್ಣವಾಗಿ ಅಪಾಯದ ಗಂಟೆಯನ್ನು ಬಾರಿಸುತ್ತದೆ. ಈ ದಿಸೆಯಲ್ಲಿ ಅಲ್ಲಿಯ ಕಾರ್ಖಾನೆಗಳ ಕೆಲಸಗಾರರಿಗೆ ನೆಮ್ಮದಿ ಇದೆ. ಪರಿಸರ ಮಾಲಿನ್ಯದ ತೊಂದರೆ ಇರದೇ ಈ ಕೆಲಸಗಳಿಗೆ ಬಹಳೇ ‘ಡಿಮ್ಯಾಂಡ’ ಕೂಡ ಇದೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...