ಮೂರು ಅವಸ್ಥೆಗಳು

ಮಂಡೂಕಗಳಿಗವಸ್ಥೆ ಮೂರು: ನಿದ್ದೆ,
ಎಚ್ಚರ, ಮಧ್ಯಂತರ. ಮನುಷ್ಯರಿಗೆ ಕೂಡ
ಅಷ್ಟೆ. ನಿದ್ದೆಯಲಿ ಕನಸು ಕೀಟಗಳದ್ದೆ

ಎಚ್ಚರದಲವುಗಳ ಹಿಡಿಯಲು ಹುಡುಕಾಟ
ಸಿಕ್ಕಿದರೆ ಊಟ, ಇಲ್ಲದಿದ್ದರೆ ಉಪವಾಸ
ಮಧ್ಯಂತರಾವಸ್ಥೆಯಲಿ ಹೀಗೆಯೇ ಬೇಟ

ಹೊಸತೇನಲ್ಲ; ತಲಾಂತರದಿಂದ ಬಂದದ್ದೆ
ಕಣ್ಣಿಗೆ ಬೀಳದ ಕರ್ತಾರ ನಡೆಸಿದ ಪವಾಡ
ನೆನೆಸಿಕೊಂಡರೇನೆ ಕಣ್ಣುಗಳರಡೂ ಒದ್ದೆ

ಅದ್ದರಿಂದಲೆ ಆಗಾಗ ಪ್ರಾರ್ಥನಾ ಕೂಟ
ಪುಣ್ಯಭೂಮಿಗಳ ಕಡೆಗೆ ಪ್ರವಾಸ
ಮಂಡೂಕಗಳಿಗೆ ಮಾತ್ರ ಇಲ್ಲ ಇಂಥ ಚಟ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರತಿ ನಾಯಕನ ಕತೆಯ ‘ಸತಿ ಸುಲೋಚನಾ’
Next post ನಲ್ಲ

ಸಣ್ಣ ಕತೆ

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…