ಸೂರ್‍ಯನಿಗೆ

ಉದಯಾಸ್ತಮಾನದ ಮಧ್ಯೆ ವರ್ಧನೆ ಕ್ಷಯ ಮರ್ತ್ಯರಿಗೆ
ಚಕ್ಷುಗಳಿಂದ ನೋಡುವುದರಿಂದ ನಮ್ಮ ದೃಷ್ಟಿ,
ಮನಸ್ಸಿನಿಂದ ಚಿಂತಿಸುವುದರಿಂದ ನಮ್ಮ ಜ್ಞಾನ,
ಭೂಮಿಯಲ್ಲಿ ಬದುಕುವುದರಿಂದ ನಮ್ಮ ಆಯಸ್ಸು-

ಸೀಮಿತ. ಸೀಮಾಬದ್ಧರು ನಾವು. ಶಕ್ತಿಗ್ರಹ ನೀನು
ಬೆಳಗು ಸಂಜೆಗಳ ನಿರಂತರ ಪರ್ಯಾಯದಲ್ಲಿ
ಹುಟ್ಟಿ ಸತ್ತರೆ ಅಕ್ಷಯ ಪುನರ್ಜನ್ಮ ನಿನಗೆ. ನಿನ್ನ
ಅಹರ್ನಿಶೆಯ ಬಂಧ ನಮ್ಮ ಮೋಕ್ಷದ ಕಬಂಧ

ಜ್ವಲಿಸುವಗ್ನಿಗೆ ಆಜ್ಯ ಮೇದಸ್ಸು ಹೋಮಹವನ
ಯಾವ ಪೂರ್ವಜರ ರೇತಸ್ಸು ಸಂಯಮನ
ನಿನಗದೆಲ್ಲವು ಆಪೋಶನ-ಮನೆಯೊಳಗೆ ಹೊರಗೆ
ಬೀದಿಯಲಿ ಮಣ್ಣಿನಲಿ ಕಡಲ ತೀರದಲಿ

ಸೆರೆಹಿಡಿದು ಹಿಡಿದ ಬೆಂಕಿ ಪ್ರಕೃತಿಪೌರುಷ
ಕಾಮದಲಿ ಹರಿದು ಸೇರಿದ ಅಂಥ ತೇಜಸ್ಸು
ಇಲ್ಲಿ ಮೊದಲು ಏನೂ ಇರದಲ್ಲಿ ನೀನುಂಟಾದೆ
ನಿನ್ನ ಪ್ರಭಾವಲಯದಲ್ಲಿ ಅದೆಷ್ಟೋ ಜೀವಿಗಳು

ದೀಪದಿಂದ ದೀಪಗಳು-ಬೆಳಕಿನ ಹಿಂದು ಮುಂದು
ಕಂಡವರು ನಾವಲ್ಲ. ಸಾಲು ದೀಪಗಳಲ್ಲಿ ಒಂದು
ಎಂದು ಅರಿತೊ ಏನೊ. ಬೆಳಕಿನಿಂದ ಬೆಳಕಿನೆಡೆಗೆ
ಸಾಗುವುದು ದೀಪಾವಳಿ ಮರಳಿ ಮರಳಿ

ಕಣ್ಣುಗಳು ಕಣ್ಣುಗಳ ನೋಡುವಾಗ ಮಾತು
ಬೆರಳುಗಳು ಬೆರಳುಗಳ ಮಿಳಿಸಿದಾಗ ಶಾಖ
ಮಾತು ಮಂತ್ರವಾದಾಗ ಪ್ರಾರ್ಥನೆ ಅಂತೆಯೇ
ಶಾಖ ದೀಪವಾದಾಗ ಪೂಜೆ. ಮೌನದಲಿ ಧ್ಯಾನ

ನಮ್ಮ ಕರ್ಮಗಳ ಹೊರ ಪರಿಧಿ ಹರಿದು
ನಿನ್ನ ವಿಸ್ತಾರಕ್ಕೆ ಎಳೆದುಕೊಂಡರೆ
ನಮ್ಮ ಭಾಷೆಗಳ ಒಳ ಅರ್ಥ ಅರಳಿ
ನಿನ್ನ ಚೈತನ್ಯಕ್ಕೆ ಸೆಳದುಕೊಂಡರೆ

ಹಗಲಿರುಳ ವರ್ಣಮಯ ಬೆಳಕು ಪಸರಿಸಿ
ಮಣ್ಣುಮರಗಿಡ ಜೀವರಾಶಿಗಳೊಂದಿಗೆ ನಾವು
ಗುರುತು ಪಡೆದಾಗ ನಿನ್ನ ಅಖಂಡ ಕಾಲದಲಿ
ಸದಾ ವರ್ತಮಾನವಾಗುವಂತೆ ಭೂತ ಭವಿಷ್ಯ

ನಿನ್ನ ಮುಖದಿಂದ ಶಕ್ತಿ ಹರಿಯಲಿ ನಮ್ಮ ಕಡೆಗೆ
ನಿನ್ನ ಮುಖದಿಂದ ಜ್ಞಾನ ಹರಿಯಲಿ ನಮ್ಮ ಕಡೆಗೆ
ನಿನ್ನ ಓಜಸ್ಸು ಬರಲಿ ನಮಗೆ
ನಿನ್ನ ಆಯಸ್ಸು ಬರಲಿ ನಮಗೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜ್ಞಾನ ಮತ್ತು ಕೌಶಲ್ಯ
Next post ಮುರಿದ ವಾದ್ಯದ ರಾಗ

ಸಣ್ಣ ಕತೆ

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

cheap jordans|wholesale air max|wholesale jordans|wholesale jewelry|wholesale jerseys