Home / ಕವನ / ಕವಿತೆ / ಸೂರ್‍ಯನಿಗೆ

ಸೂರ್‍ಯನಿಗೆ

ಉದಯಾಸ್ತಮಾನದ ಮಧ್ಯೆ ವರ್ಧನೆ ಕ್ಷಯ ಮರ್ತ್ಯರಿಗೆ
ಚಕ್ಷುಗಳಿಂದ ನೋಡುವುದರಿಂದ ನಮ್ಮ ದೃಷ್ಟಿ,
ಮನಸ್ಸಿನಿಂದ ಚಿಂತಿಸುವುದರಿಂದ ನಮ್ಮ ಜ್ಞಾನ,
ಭೂಮಿಯಲ್ಲಿ ಬದುಕುವುದರಿಂದ ನಮ್ಮ ಆಯಸ್ಸು-

ಸೀಮಿತ. ಸೀಮಾಬದ್ಧರು ನಾವು. ಶಕ್ತಿಗ್ರಹ ನೀನು
ಬೆಳಗು ಸಂಜೆಗಳ ನಿರಂತರ ಪರ್ಯಾಯದಲ್ಲಿ
ಹುಟ್ಟಿ ಸತ್ತರೆ ಅಕ್ಷಯ ಪುನರ್ಜನ್ಮ ನಿನಗೆ. ನಿನ್ನ
ಅಹರ್ನಿಶೆಯ ಬಂಧ ನಮ್ಮ ಮೋಕ್ಷದ ಕಬಂಧ

ಜ್ವಲಿಸುವಗ್ನಿಗೆ ಆಜ್ಯ ಮೇದಸ್ಸು ಹೋಮಹವನ
ಯಾವ ಪೂರ್ವಜರ ರೇತಸ್ಸು ಸಂಯಮನ
ನಿನಗದೆಲ್ಲವು ಆಪೋಶನ-ಮನೆಯೊಳಗೆ ಹೊರಗೆ
ಬೀದಿಯಲಿ ಮಣ್ಣಿನಲಿ ಕಡಲ ತೀರದಲಿ

ಸೆರೆಹಿಡಿದು ಹಿಡಿದ ಬೆಂಕಿ ಪ್ರಕೃತಿಪೌರುಷ
ಕಾಮದಲಿ ಹರಿದು ಸೇರಿದ ಅಂಥ ತೇಜಸ್ಸು
ಇಲ್ಲಿ ಮೊದಲು ಏನೂ ಇರದಲ್ಲಿ ನೀನುಂಟಾದೆ
ನಿನ್ನ ಪ್ರಭಾವಲಯದಲ್ಲಿ ಅದೆಷ್ಟೋ ಜೀವಿಗಳು

ದೀಪದಿಂದ ದೀಪಗಳು-ಬೆಳಕಿನ ಹಿಂದು ಮುಂದು
ಕಂಡವರು ನಾವಲ್ಲ. ಸಾಲು ದೀಪಗಳಲ್ಲಿ ಒಂದು
ಎಂದು ಅರಿತೊ ಏನೊ. ಬೆಳಕಿನಿಂದ ಬೆಳಕಿನೆಡೆಗೆ
ಸಾಗುವುದು ದೀಪಾವಳಿ ಮರಳಿ ಮರಳಿ

ಕಣ್ಣುಗಳು ಕಣ್ಣುಗಳ ನೋಡುವಾಗ ಮಾತು
ಬೆರಳುಗಳು ಬೆರಳುಗಳ ಮಿಳಿಸಿದಾಗ ಶಾಖ
ಮಾತು ಮಂತ್ರವಾದಾಗ ಪ್ರಾರ್ಥನೆ ಅಂತೆಯೇ
ಶಾಖ ದೀಪವಾದಾಗ ಪೂಜೆ. ಮೌನದಲಿ ಧ್ಯಾನ

ನಮ್ಮ ಕರ್ಮಗಳ ಹೊರ ಪರಿಧಿ ಹರಿದು
ನಿನ್ನ ವಿಸ್ತಾರಕ್ಕೆ ಎಳೆದುಕೊಂಡರೆ
ನಮ್ಮ ಭಾಷೆಗಳ ಒಳ ಅರ್ಥ ಅರಳಿ
ನಿನ್ನ ಚೈತನ್ಯಕ್ಕೆ ಸೆಳದುಕೊಂಡರೆ

ಹಗಲಿರುಳ ವರ್ಣಮಯ ಬೆಳಕು ಪಸರಿಸಿ
ಮಣ್ಣುಮರಗಿಡ ಜೀವರಾಶಿಗಳೊಂದಿಗೆ ನಾವು
ಗುರುತು ಪಡೆದಾಗ ನಿನ್ನ ಅಖಂಡ ಕಾಲದಲಿ
ಸದಾ ವರ್ತಮಾನವಾಗುವಂತೆ ಭೂತ ಭವಿಷ್ಯ

ನಿನ್ನ ಮುಖದಿಂದ ಶಕ್ತಿ ಹರಿಯಲಿ ನಮ್ಮ ಕಡೆಗೆ
ನಿನ್ನ ಮುಖದಿಂದ ಜ್ಞಾನ ಹರಿಯಲಿ ನಮ್ಮ ಕಡೆಗೆ
ನಿನ್ನ ಓಜಸ್ಸು ಬರಲಿ ನಮಗೆ
ನಿನ್ನ ಆಯಸ್ಸು ಬರಲಿ ನಮಗೆ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...