Home / ಕವನ / ಕವಿತೆ / ಸೂರ್‍ಯನಿಗೆ

ಸೂರ್‍ಯನಿಗೆ

ಉದಯಾಸ್ತಮಾನದ ಮಧ್ಯೆ ವರ್ಧನೆ ಕ್ಷಯ ಮರ್ತ್ಯರಿಗೆ
ಚಕ್ಷುಗಳಿಂದ ನೋಡುವುದರಿಂದ ನಮ್ಮ ದೃಷ್ಟಿ,
ಮನಸ್ಸಿನಿಂದ ಚಿಂತಿಸುವುದರಿಂದ ನಮ್ಮ ಜ್ಞಾನ,
ಭೂಮಿಯಲ್ಲಿ ಬದುಕುವುದರಿಂದ ನಮ್ಮ ಆಯಸ್ಸು-

ಸೀಮಿತ. ಸೀಮಾಬದ್ಧರು ನಾವು. ಶಕ್ತಿಗ್ರಹ ನೀನು
ಬೆಳಗು ಸಂಜೆಗಳ ನಿರಂತರ ಪರ್ಯಾಯದಲ್ಲಿ
ಹುಟ್ಟಿ ಸತ್ತರೆ ಅಕ್ಷಯ ಪುನರ್ಜನ್ಮ ನಿನಗೆ. ನಿನ್ನ
ಅಹರ್ನಿಶೆಯ ಬಂಧ ನಮ್ಮ ಮೋಕ್ಷದ ಕಬಂಧ

ಜ್ವಲಿಸುವಗ್ನಿಗೆ ಆಜ್ಯ ಮೇದಸ್ಸು ಹೋಮಹವನ
ಯಾವ ಪೂರ್ವಜರ ರೇತಸ್ಸು ಸಂಯಮನ
ನಿನಗದೆಲ್ಲವು ಆಪೋಶನ-ಮನೆಯೊಳಗೆ ಹೊರಗೆ
ಬೀದಿಯಲಿ ಮಣ್ಣಿನಲಿ ಕಡಲ ತೀರದಲಿ

ಸೆರೆಹಿಡಿದು ಹಿಡಿದ ಬೆಂಕಿ ಪ್ರಕೃತಿಪೌರುಷ
ಕಾಮದಲಿ ಹರಿದು ಸೇರಿದ ಅಂಥ ತೇಜಸ್ಸು
ಇಲ್ಲಿ ಮೊದಲು ಏನೂ ಇರದಲ್ಲಿ ನೀನುಂಟಾದೆ
ನಿನ್ನ ಪ್ರಭಾವಲಯದಲ್ಲಿ ಅದೆಷ್ಟೋ ಜೀವಿಗಳು

ದೀಪದಿಂದ ದೀಪಗಳು-ಬೆಳಕಿನ ಹಿಂದು ಮುಂದು
ಕಂಡವರು ನಾವಲ್ಲ. ಸಾಲು ದೀಪಗಳಲ್ಲಿ ಒಂದು
ಎಂದು ಅರಿತೊ ಏನೊ. ಬೆಳಕಿನಿಂದ ಬೆಳಕಿನೆಡೆಗೆ
ಸಾಗುವುದು ದೀಪಾವಳಿ ಮರಳಿ ಮರಳಿ

ಕಣ್ಣುಗಳು ಕಣ್ಣುಗಳ ನೋಡುವಾಗ ಮಾತು
ಬೆರಳುಗಳು ಬೆರಳುಗಳ ಮಿಳಿಸಿದಾಗ ಶಾಖ
ಮಾತು ಮಂತ್ರವಾದಾಗ ಪ್ರಾರ್ಥನೆ ಅಂತೆಯೇ
ಶಾಖ ದೀಪವಾದಾಗ ಪೂಜೆ. ಮೌನದಲಿ ಧ್ಯಾನ

ನಮ್ಮ ಕರ್ಮಗಳ ಹೊರ ಪರಿಧಿ ಹರಿದು
ನಿನ್ನ ವಿಸ್ತಾರಕ್ಕೆ ಎಳೆದುಕೊಂಡರೆ
ನಮ್ಮ ಭಾಷೆಗಳ ಒಳ ಅರ್ಥ ಅರಳಿ
ನಿನ್ನ ಚೈತನ್ಯಕ್ಕೆ ಸೆಳದುಕೊಂಡರೆ

ಹಗಲಿರುಳ ವರ್ಣಮಯ ಬೆಳಕು ಪಸರಿಸಿ
ಮಣ್ಣುಮರಗಿಡ ಜೀವರಾಶಿಗಳೊಂದಿಗೆ ನಾವು
ಗುರುತು ಪಡೆದಾಗ ನಿನ್ನ ಅಖಂಡ ಕಾಲದಲಿ
ಸದಾ ವರ್ತಮಾನವಾಗುವಂತೆ ಭೂತ ಭವಿಷ್ಯ

ನಿನ್ನ ಮುಖದಿಂದ ಶಕ್ತಿ ಹರಿಯಲಿ ನಮ್ಮ ಕಡೆಗೆ
ನಿನ್ನ ಮುಖದಿಂದ ಜ್ಞಾನ ಹರಿಯಲಿ ನಮ್ಮ ಕಡೆಗೆ
ನಿನ್ನ ಓಜಸ್ಸು ಬರಲಿ ನಮಗೆ
ನಿನ್ನ ಆಯಸ್ಸು ಬರಲಿ ನಮಗೆ
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...