ಛೇ ಛೇ ಬ್ಯಾಡ ಬ್ಯಾಡ

ಛೇ ಛೇ ಬ್ಯಾಡ ಬ್ಯಾಡ ಬ್ಯಾಡ ತಗಿ
ಪಾಡ ಕಾಣೋದಿಲ್ಲೋ ಸಮರಾ ಐಸುರಾ              ||ಪ||

ಕವಿತ ಮಾಡುವದು ಮೂಲಸ್ಥಾನದಲಿ
ತಿಳಿಯಲೋ ತಿಳಿದ್ಹೇಳಲೋ
ಸೆಳವಿಗೆ ಬಿದ್ದು ನೀನು ಬಳಲಿ ಬಳಲಿ ಸತ್ತಿ     ||೧||

ಅಂಗವನರಿಯದೆ ರಂಗಿಲೆ ಹಾಡುವದು
ಸಂಗನೇ ಮುದಿಮಂಗನೇ
ಬಂಗಿ ಸೇದವರಂತೆ ಕೊಂಗಿ ಕವಿತೆ ನಿಂದು         ||೨||

ಆರ್ಥವನರಿಯದೆ ಮರ್ತ ಹಾಡುವದು
ಜಾಣನೇ ಮುದಿ ಕೋಣನೆ
ತುರ್ತ ನಮ್ಮಲ್ಲಿಗೆ ಬುದು ಶರ್ತಹಾಕುವದುಂಟೆ    ||೩||

ದೇಶದೊಳಗ ಇದು ಹೇಸಿ ಕವಿತೆ ನಿಂದು
ಬ್ಯಾಡಲೋ ಮಹಾ ಕೆಡಲೋ
ಬ್ಯಾಸರಾದಿತು ಶಿಶುನಾಳಧೀಶನಿಗೆ            ||೪||

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜೆಟ್ ವಿಮಾನಗಳು
Next post ನಗೆ ಡಂಗುರ – ೫೧

ಸಣ್ಣ ಕತೆ

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…