Home / ಕವನ / ಕವಿತೆ / ಈ ಸಲದ ಯುಗಾದಿ

ಈ ಸಲದ ಯುಗಾದಿ

ಕಳೆದ ಯುಗಾದಿಯಂತಲ್ಲ ಈ ಸಲದ ಯುಗಾದಿ
ಕಳೆದ ಯುಗಾದಿ ಹುಸಿಮಳೆಯಂತೆ ಮಿಂಚಿ ಗುಡುಗಿ
ಹೊರಟು ಹೋಯಿತು ನೆಲವನ್ನು ತೊಯ್ಯದೆ

ಈ ಸಲದ ಯುಗಾದಿ ನಿಜಕ್ಕೂ ಹೊಸ ಯುಗವನ್ನು
ತೆರೆಯುವುದು-ಎಂತಲೇ ಹೊಸ ತೀರ್ಮಾನಗಳ
ಮಾಡೋಣವೆಂದು ಕುಳಿತರೆ ಸಾಕು ಆಕ್ರಮಿಸುತ್ತವೆ

ಸೊಳ್ಳೆಗಳು! ಈ ಯುಗದ ಆದಿಯಲ್ಲಿ ನೀನು,
ಕೊನೆಯಲ್ಲಿ ನಾವು ಎಂದು ಹಾಡುತ್ತವೆ. ಹೆದರಲಾರೆ
ಕೊಂಡು ತಂದಿರುವೆ ಹೊಸತೊಂದು ಸೊಳ್ಳೆ ಪರದೆ

ಕಳೆದ ಯುಗಾದಿಯಂತಲ್ಲ ಈ ಯುಗಾದಿಯೆಂಬು-
ದೀ ಕ್ರಿಮಿಕೀಟಗಳಿಗೇನು ಗೊತ್ತು? ಕಳೆದ ಯುಗಾದಿಗೆ
ಗಸಗಸೆ ಪಾಯಸ, ಸೀಕರಣೆ, ಹೊಸ ಬಟ್ಟೆ ಬರೆ

ಸಿನೆಮ, ಸ್ತ್ರೀಸಂಗ, ಬಹಳ ಮಜವಿತ್ತು ನಿಜ; ಈ ಬಾರಿ
ಇವೊಂದೂ ಇಲ್ಲ. ನೆನಪುಗಳಷ್ಟೆ ಇವೆ. ಕಾರಣ
ವಾಸ್ತವಕ್ಕಿಂತ ಅದರ ನೆನಪೇ ಹೆಚ್ಚು ಸವಿಯೆಂದು

ಸವಿಯುವೆನು ಗಾಳಿಯನು, ಗಾಳಿಯಲಿ ತೇಲಿ ಬರುವ
ನೆರೆಮನೆಯ ಸುಂದರಿಯ ಅಡುಗೆಯ ಸುವಾಸವನು!
ಈ ಸಲದ ಯುಗಾದಿಗೆ ಗ್ರೀಕರ ನಾಟಕಗಳು

ಅಯನೆಸ್ಕೊ ಕಥೆಗಳು, ಅನಂತಮೂರ್ತಿಯ ‘ಅವಸ್ಥೆ’
ಸಾಕಲ್ಲ ಒಬ್ಬ ಲೇಖಕನಿಗಿನ್ನೇನು ಬೇಕು?
ಅಲ್ಲದೆ ನನ್ನದೂ ಕೆಲವು ತುಣುಕುಗಳಿವೆ ಬಿಡಿಯಾಗಿ

ಗಾಳಿಯಲ್ಲಿ ಹಾರಿಹೋಗದಂತೆ ಹರಿದ್ವಾರದಿಂದ ತರಿಸಿದ
ಕಲ್ಲೊಂದನಿರಿಸಿರುವೆ. ಎಷ್ಟೋ ಸಾವಿರ ವರುಷ
ಗಂಗೆಯಲಿ ಮೈ ತೊಳೆದು ನುಣುಪಾದ ದುಂಡುಕಲ್ಲು

ಕುಳಿತಿದೆ ನಿಜಕ್ಕೂ ನನ್ನ ಮನಸ್ಸಾಕ್ಷಿಯ ಮೇಲೆ
ನನ್ನ ವಾಗರ್ಥಗಳ ಪಾಪವನ್ನು ತನ್ನೊಳಗೆ ಹೀರುತ್ತ
ನಿಮಿಷ ನಿಮಿಷವೂ ಅದರ ಭಾರ ಹೆಚ್ಚುತ್ತ
****

Tagged:

Leave a Reply

Your email address will not be published. Required fields are marked *

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...