Home / ಕವನ / ಕವಿತೆ / ಈ ಸಲದ ಯುಗಾದಿ

ಈ ಸಲದ ಯುಗಾದಿ

ಕಳೆದ ಯುಗಾದಿಯಂತಲ್ಲ ಈ ಸಲದ ಯುಗಾದಿ
ಕಳೆದ ಯುಗಾದಿ ಹುಸಿಮಳೆಯಂತೆ ಮಿಂಚಿ ಗುಡುಗಿ
ಹೊರಟು ಹೋಯಿತು ನೆಲವನ್ನು ತೊಯ್ಯದೆ

ಈ ಸಲದ ಯುಗಾದಿ ನಿಜಕ್ಕೂ ಹೊಸ ಯುಗವನ್ನು
ತೆರೆಯುವುದು-ಎಂತಲೇ ಹೊಸ ತೀರ್ಮಾನಗಳ
ಮಾಡೋಣವೆಂದು ಕುಳಿತರೆ ಸಾಕು ಆಕ್ರಮಿಸುತ್ತವೆ

ಸೊಳ್ಳೆಗಳು! ಈ ಯುಗದ ಆದಿಯಲ್ಲಿ ನೀನು,
ಕೊನೆಯಲ್ಲಿ ನಾವು ಎಂದು ಹಾಡುತ್ತವೆ. ಹೆದರಲಾರೆ
ಕೊಂಡು ತಂದಿರುವೆ ಹೊಸತೊಂದು ಸೊಳ್ಳೆ ಪರದೆ

ಕಳೆದ ಯುಗಾದಿಯಂತಲ್ಲ ಈ ಯುಗಾದಿಯೆಂಬು-
ದೀ ಕ್ರಿಮಿಕೀಟಗಳಿಗೇನು ಗೊತ್ತು? ಕಳೆದ ಯುಗಾದಿಗೆ
ಗಸಗಸೆ ಪಾಯಸ, ಸೀಕರಣೆ, ಹೊಸ ಬಟ್ಟೆ ಬರೆ

ಸಿನೆಮ, ಸ್ತ್ರೀಸಂಗ, ಬಹಳ ಮಜವಿತ್ತು ನಿಜ; ಈ ಬಾರಿ
ಇವೊಂದೂ ಇಲ್ಲ. ನೆನಪುಗಳಷ್ಟೆ ಇವೆ. ಕಾರಣ
ವಾಸ್ತವಕ್ಕಿಂತ ಅದರ ನೆನಪೇ ಹೆಚ್ಚು ಸವಿಯೆಂದು

ಸವಿಯುವೆನು ಗಾಳಿಯನು, ಗಾಳಿಯಲಿ ತೇಲಿ ಬರುವ
ನೆರೆಮನೆಯ ಸುಂದರಿಯ ಅಡುಗೆಯ ಸುವಾಸವನು!
ಈ ಸಲದ ಯುಗಾದಿಗೆ ಗ್ರೀಕರ ನಾಟಕಗಳು

ಅಯನೆಸ್ಕೊ ಕಥೆಗಳು, ಅನಂತಮೂರ್ತಿಯ ‘ಅವಸ್ಥೆ’
ಸಾಕಲ್ಲ ಒಬ್ಬ ಲೇಖಕನಿಗಿನ್ನೇನು ಬೇಕು?
ಅಲ್ಲದೆ ನನ್ನದೂ ಕೆಲವು ತುಣುಕುಗಳಿವೆ ಬಿಡಿಯಾಗಿ

ಗಾಳಿಯಲ್ಲಿ ಹಾರಿಹೋಗದಂತೆ ಹರಿದ್ವಾರದಿಂದ ತರಿಸಿದ
ಕಲ್ಲೊಂದನಿರಿಸಿರುವೆ. ಎಷ್ಟೋ ಸಾವಿರ ವರುಷ
ಗಂಗೆಯಲಿ ಮೈ ತೊಳೆದು ನುಣುಪಾದ ದುಂಡುಕಲ್ಲು

ಕುಳಿತಿದೆ ನಿಜಕ್ಕೂ ನನ್ನ ಮನಸ್ಸಾಕ್ಷಿಯ ಮೇಲೆ
ನನ್ನ ವಾಗರ್ಥಗಳ ಪಾಪವನ್ನು ತನ್ನೊಳಗೆ ಹೀರುತ್ತ
ನಿಮಿಷ ನಿಮಿಷವೂ ಅದರ ಭಾರ ಹೆಚ್ಚುತ್ತ
****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...