Home / ಕವನ / ಕವಿತೆ / ಭಯೋತ್ಪಾದಕರು

ಭಯೋತ್ಪಾದಕರು

ತಲೆಗೂದಲು ಕೆದರಿರುವುದು
ಗಡ್ಡ ಹೇರಳ ಬೆಳೆದಿರುವುದು
ಕಣ್ಣು ಆಳಕ್ಕೆ ಇಳಿದಿರುವುದು
ಜೇಬಿನಲ್ಲಿ ಬಾಂಬಿರುವುದು

ಮಂದಿಯ ಹಿಂದೆಯು ಇರುವರು
ಮಂದಿಯ ಮುಂದೆಯು ಇರುವರು
ಮಂದಿಯ ನಡುವೆಯ ಇರುವರು
ಯಾರಿಗೂ ಕಾಣದೆ ಇರುವರು

ಹಿಮಾಲಯದ ಮೇಲೆ ಹಿಮ ಬೀಳುವುದು
ಮನೆಯಂಗಳದ ಮೇಲೆ ಮಳೆ ಬೀಳುವುದು
ಕಾಡಿನ ಮೇಲೆ ಬೆಂಕಿ ಬೀಳುವುದು
ನಿದ್ರಿಸಿದವರಿಗೆ ನಿದ್ದೆ ಬೀಳುವುದು

ಒಬ್ಬಾನೊಬ್ಬ ರಾಜ
ಕನಸೊಂದ ಕಂಡ
ಪೇಪರ್‌ವೈಟಿನ ಬದಲಿಗೆ ಇತ್ತು
ಮೇಜಿನ ಮೇಲವನ ರುಂಡ

ಕೂಡಲೆ ಎದ್ದು ಅಪ್ಪಣೆಮಾಡಿದ
ಪೇಪರ್ ವೈಟುಗಳಿನ್ನು ನಿಷಿದ್ಧ
ಎಲ್ಲವನೂ ಹುಡುಕಿ ತೆಗೆಸಿ
ಸಮುದ್ರದಲ್ಲಿ ಮುಳುಗಿಸಿದ

ಆದರೇನು ಭಯೋತ್ಪಾದಕರು
ಬೇರೆ ಕನಸ ಕಳಿಸಿದರು
ತುಂಡರಿಸಿದ ಅವನ ಕೈಗಳು
ಆದವು ರೇಲ್ವೆ ಸಿಗ್ನಲುಗಳು

ಮಸಿಯ ಬದಲಿಗೆ ನೆತ್ತರು
ಉಪ್ಪಿನಂತೆ ಬೆವರು!
ಕಣ್ಣು ತಾಳೆಹಣ್ಣುಗಳು
ಎದೆಯೊಳಗೆ ಇದ್ದಿಲು!

ಏಳಲಾರ ಕನಸು ಹರಿದು
ಎದ್ದರೆ ಗತಿಯೇನು ?
ಹಾಗೆ ಸುಮ್ಮನೆ ಮಲಗಿರುವನು
ಯುಗ ಮುಗಿಯುವುದ ಕಾದು
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...