Home / ಕವನ / ಕವಿತೆ / ಜಲಾಲುದ್ದೀನ್ ಜಲಾಲಿ

ಜಲಾಲುದ್ದೀನ್ ಜಲಾಲಿ

ಕಾಬಾದ ಕಡೆ ಮುಖಮಾಡಿ ದಿನವೂ ನಮಾಜು
ಮಾಡುವ ಗೆಳೆಯನೆ ಹೇಳು ನೀನು ನನಗೆ
ಸರ್ವಶಕ್ತನಾದ ದೇವರ ರೀತಿ ರಿವಾಜು

ಬೀದಿಯಲ್ಲಿ ಬಿದ್ದವರಿಗೆ ಕೊಡುವನೆ ಮನೆ
ಹಸಿದ ಹೊಟ್ಚೆಗೆ ಕೂಳು ಹಾಗೂ ಬಿಸಿಲಿಗೆ
ಬರಡಾದ ಹೊಲಗಳಲ್ಲಿ ಧಾನ್ಯಗಳ ತೆನೆ

ಎಲ್ಲರನ್ನೂ ಸಮನಾಗಿ ಸೃಷ್ಟಿಸಿದ್ದಾದರೆ ಕರ್ತ
ಅಲ್ಲಿ ಭಾರೀ ಮಹಡಿ ಇಲ್ಲಿ ಬರೇ ಜೋಪಡಿ
ಇಂಥ ವಿಪರ್ಯಾಸಕ್ಕೆ ಏನು ಅರ್ಥ?

ಕೆಲವರೆನ್ನುವರು ದೇವರೆಂದರೆ ಮನುಷ್ಯಕೋಟಿ
ಸಮರ್ಥಿಸಲೆಂದು ತನ್ನೊಳಗಿನ ಸೈತಾನುಗಳ
ಬೇಕುಬೇಕೆಂದೇ ಉಂಟುಮಾಡಿದ ಸೃಷ್ಟಿ

ನಿಜವಿದ್ದೀತು ಅಥವ ಇಲ್ಲಿದಿದ್ದೀತು
ನೀನಂತೂ ಕಟ್ಟಾ ದೈವ ವಿಶ್ವಾಸಿ-ನಿನ್ನಷ್ಟು
ಅಖಂಡ ವಿಶ್ವಾಸ ನನ್ನ ಒಳತೋಟಿಗೆ ಹೊರತು

ಆದರೂ ಅನಿಸುವುದು ಕೆಲವೊಮ್ಮೆ ಆಶ್ಚರ್ಯ
ಪ್ರತಿ ನಸುಕಿನಲ್ಲೂ ಯಾಕೆ ಕೂಗುವುದು ಕೋಳಿ
ಮೂಡುವುದು ಯಾಕೆ ಮೂಡಲೇಬೇಕಾದಂತೆ ಸೂರ್ಯ

ವರುಷ ವರುಷವೂ ಬರುವ ವಲಸೆಯ ಪಕ್ಷಿ
ಮಾಯಕದಲ್ಲಿ ಬಿರಿಯುವ ಹೂವು ಮಾಯುವ ನೋವು
ಸಾಕೆ ನಂಬುವುದಕ್ಕೆ ಇಷ್ಟು ಸಾಕ್ಷಿ?
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...