ನಾನು ಪ್ರೀತಿಸಿದ ಹುಡುಗಿಯರು

ಅವರೆಲ್ಲಿದ್ದಾರೆ ಈಗ? ಕಾಲ ಕಾಲಕ್ಕೆ ನನ್ನೆದೆಯ
ತಿದಿಯೊತ್ತಿ ಜೀವಕ್ಕೆ ಜೀವ ಕೊಡುತಿದ್ದವರು?
ಕೆಲವರಿದ್ದರು ಕಾಸರಗೋಡಿನ ಹಳೆಮನೆಗಳಲ್ಲಿ
ದೀಪಗಳಂತೆ ಉರಿಯುತ್ತ-ಇನ್ನು ಕೆಲವರು
ತಿರುವನಂತಪುರದಲ್ಲಿ, ತೀರ ಕೊನೆಯವಳು
ಬಾರ್ಸಿಲೋನಾದ ಯಾವುದೋ ಬೀದಿಯಲ್ಲಿ

ಈಗೆಲ್ಲಿಯೆಂದು ಹೇಳುವುದು ಹೇಗೆ-ಒಬೊಬ್ಬರಿಗು
ಕೊನೆಯ ಪತ್ರ ಬರೆದು ಎಷ್ಟೋ ಕಾಲವಾಗಿದೆ.
ಅವರ ವಿಳಾಸಗಳನ್ನೂ ಹರಿದು ಹಾಕಿದ್ದೇನೆ-
ಅಚಾನಕವಾಗಿ ಎಂದಾದರೂ ಎದುರು ಸಿಕ್ಕಿದರೆ
ಅವರ ಮುಖ ಕೆಂಪಾಗುತ್ತದೆ, ಹೆಜ್ಜೆ ತಡವುತ್ತದೆ,
ಕೈಚೀಲ ಕೆಳಗೆ ಬೀಳುತ್ತದೆ-ಎಂಬ ಭ್ರಮೆ ನನಗಿಲ್ಲ.

ಒಬ್ಬಳಿದ್ದಳು ದೈವವಿಶ್ವಾಸಿ-ಪ್ರೇಮದಲ್ಲಿ ತನ್ನ
ದೈವವನ್ನು ಕಾಣಬೇಕೆನ್ನುತ್ತಿದ್ದಳು, ಇನ್ನೊಬ್ಬಾಕೆ
ಕ್ರಾಂತಿಕಾರಿಣಿ ಇಡಿಯ ಸಮುದಾಯವನ್ನೆ ತಿದ್ದಲೆಳಸಿದ್ದಳು;
ಮಗದೊಬ್ಬಳು ಕನಸುಗಾರ್ತಿ, ಎಲ್ಲ ಕಡೆಯೂ ತನ್ನ
ಪ್ರತಿಬಿಂಬಗಳನ್ನೆ ಕಾಣುತಿದ್ದಳು-ನನ್ನ ಮಾನಸದಲ್ಲಿ
ಒಬ್ಬರ ಮೇಲೊಬ್ಬರಂತೆ ಅಲೆಯೆಬ್ಬಿಸಿ ಹೋದರು

ಕೈಗೊಳ್ಳಲೆ ನಾನೊಂದು ತೀರ್ಥಯಾತ್ರೆ. ಒಬ್ಬೊಬ್ಬರನು
ಹುಡುಕುತ್ತ ಅರಿಯದ ಪ್ರದೇಶಗಳಲ್ಲಿ ಅಪರಿಚಿತ ದೇಶಗಳಲ್ಲಿ
ಅವರಿವರ ಕೇಳುತ್ತ ತೋಚಿದ ಕಾರಣಗಳ ಕೊಡುತ್ತ
ಸಂತೆ ಸೇರಿದಲ್ಲಿ ಸೇರಿ ರಾತ್ರಿಗೆ ಮೊದಲೆ ಹರದಾರಿ ಸಾಗಿ
ಕತ್ತಲಾದಲ್ಲಿ ಮಲಗಿ ಮುಂಜಾವದ ಬೆಳಕಿನಲ್ಲಿ ನಡೆದು
ಕಾಣುವೆನೆ ನಾನು ಕಾಣಬೇಕೆಂದು ಬಯಸಿದವರ?

ಗುರುತು ಬದಲಾಗಿರಬಹುದೆ? ಮಕ್ಕಳಾಗಿರಬಹುದೆ?
ಮೈಮನಸ್ಸಿನ ಬಿಗಿತ ಸಡಿಲಗೊಂಡಿರಬಹುದೆ?
ಹಳೆಯ ಹಟಗಳನೀಗ ಬಿಟ್ಟುಕೊಟ್ಟಿರಬಹುದೆ ?
ಗತಕಾಲದ ನೆನಪು-ಹೂವಿನಂತಹ ಕದಪು
ಜರ್ಜರಿತವಾಗಿರಬಹುದೆ ಇನ್ನೆಂದು ಮರುಕಳಿಸದಂತೆ
ಬೇರೆ ಗಂಡಸರ ನಿರಂಕುಶ ಪ್ರಭುತ್ವಕ್ಕೆ ಸಿಕ್ಕು?

ಹೀಗೊಂದು ಬೀದಿಯಲಿ ಕಂಡೆನೊಬ್ಬಳನೆನಿಸಿ
ಬದಿಯ ಹೋಟೆಲ ಹೊಕ್ಕು ದಿಕ್ಕು ತೋಚದೆ ಕುಳಿತೆ.
ಕುಳಿತಿದ್ದನೊಬ್ಬಾತ ಇಳಿವಯಸ್ಕ ಅನ್ಯಮನಸ್ಕ
ಗುಳಿಬಿದ್ದ ಕಣ್ಣುಗಳ ಹಾಯಿಸಿ ಬೀದಿಯ ಕಡೆಗೆ
ಹಾಯುತಿದ್ದುವು ಅವನ ಮುಖದ ಸುಕ್ಕುಗಳ ಮೇಲೆ
ಎಷ್ಟೋ ಚಿತ್ರಗಳ ಸರಮಾಲೆ ಎಷ್ಟೋ ಸಮುದ್ರಗಳ ಅಲೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪತ್ರ – ೫
Next post ಶೂನ್ಯದ ಮೋಹ

ಸಣ್ಣ ಕತೆ

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

cheap jordans|wholesale air max|wholesale jordans|wholesale jewelry|wholesale jerseys