Home / ಕವನ / ಕವಿತೆ / ಸಮುದ್ರ

ಸಮುದ್ರ

ಸಮುದ್ರವಿಲ್ಲದ ಹೈದರಾಬಾದಿಗೆ ನಾನೇ ಸಮುದ್ರ-
ವೆಂದು ಹರಡಿದೆ ಆ ಮಹಾನಗರದ ಉದ್ದಗಲ
ತುಂಬಿ ಬೀದಿಗಳ ತುಂಬಿ ಕೇರಿಗಳ
ಒಳಗೊಳುವೆನೆಂದು ನನ್ನ ತಳಮಳದಲ್ಲಿ
ಅದರ ಕಳವಳ

ತಲ್ಲಣಗೊಳ್ಳುತ್ತ
ಕರೆದು ಕೈ ಚಾಚಿ
ತೆರೆದು ತೆರೆಬಿಚ್ಚಿ
ತೆರೆದರೂ ತೆರೆಯದ ಪ್ರಕ್ಷುಬ್ಧ ಚಿತ್ತ
ಗುಡಿ ಗೋಪುರ ಮಿನಾರಗಳ ಸುತ್ತ

ಸುತ್ತಿದೆನು ಮುತ್ತಿದೆನು
ಎಟುಕದ ಎತ್ತರದಲ್ಲಿ
ಮೋಡಗಳ ಬಿತ್ತಿದೆನು
ಅಂಗಡಿ ಜಗಲಿಗಳಲ್ಲಿ
ಮಸೀದಿ ಮೆಟ್ಟಿಲುಗಳಲ್ಲಿ
ಯಾರ ಮನೆಯಂಗಳದಲ್ಲಿ
ಎಲ್ಲೆಂದರಲ್ಲಿ
ನನ್ನ ಕನಸುಗಳ ಕೆತ್ತಿದೆನು
ಒಳಗೇ ಬತ್ತಿದೆನು

ಮುಸ್ಸಂಜೆಯ ಕತ್ತಲಲ್ಲಿ
ಹೆಕ್ಕಿದವರು ಯಾರು ಒಡೆದ ಚಿಪ್ಪಿಗಳ?
ಯಾರಿಗೂ ಕೇಳಿಸಬಾರದೆಂದು
ಬಿಕ್ಕಿದವರು ಯಾರು ಏಕಾಂತದಲ್ಲಿ ದುಃಖಗಳ?
ಅಳಿಸಿ ಹಾಕುತ್ತ ಹೋದವರು ಯಾರು
ತಮ್ಮ ಎಲ್ಲ ಗುರುತುಗಳ?

ಗಾಳಿಯಾದರೋ ಈಗ ತಣ್ಣಗಾಗಿದೆ
ಬೇರೆ ಸಮುದ್ರಗಳ ಬೇರೆ
ಆಘಾತಗಳ ನೆನಪು ತರುತ್ತಿದೆ
ಯುಗಗಳಾಗಿವೆ ನಿದ್ರಿಸಿದೆ-
ನಿದ್ರಿಸುವುದಿದೆ
ನನ್ನ ಮೇರೆಗಳ ತಬ್ಬವುದಿದೆ.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...