Home / ಕವನ / ಕವಿತೆ / ಸಮುದ್ರ

ಸಮುದ್ರ

ಸಮುದ್ರವಿಲ್ಲದ ಹೈದರಾಬಾದಿಗೆ ನಾನೇ ಸಮುದ್ರ-
ವೆಂದು ಹರಡಿದೆ ಆ ಮಹಾನಗರದ ಉದ್ದಗಲ
ತುಂಬಿ ಬೀದಿಗಳ ತುಂಬಿ ಕೇರಿಗಳ
ಒಳಗೊಳುವೆನೆಂದು ನನ್ನ ತಳಮಳದಲ್ಲಿ
ಅದರ ಕಳವಳ

ತಲ್ಲಣಗೊಳ್ಳುತ್ತ
ಕರೆದು ಕೈ ಚಾಚಿ
ತೆರೆದು ತೆರೆಬಿಚ್ಚಿ
ತೆರೆದರೂ ತೆರೆಯದ ಪ್ರಕ್ಷುಬ್ಧ ಚಿತ್ತ
ಗುಡಿ ಗೋಪುರ ಮಿನಾರಗಳ ಸುತ್ತ

ಸುತ್ತಿದೆನು ಮುತ್ತಿದೆನು
ಎಟುಕದ ಎತ್ತರದಲ್ಲಿ
ಮೋಡಗಳ ಬಿತ್ತಿದೆನು
ಅಂಗಡಿ ಜಗಲಿಗಳಲ್ಲಿ
ಮಸೀದಿ ಮೆಟ್ಟಿಲುಗಳಲ್ಲಿ
ಯಾರ ಮನೆಯಂಗಳದಲ್ಲಿ
ಎಲ್ಲೆಂದರಲ್ಲಿ
ನನ್ನ ಕನಸುಗಳ ಕೆತ್ತಿದೆನು
ಒಳಗೇ ಬತ್ತಿದೆನು

ಮುಸ್ಸಂಜೆಯ ಕತ್ತಲಲ್ಲಿ
ಹೆಕ್ಕಿದವರು ಯಾರು ಒಡೆದ ಚಿಪ್ಪಿಗಳ?
ಯಾರಿಗೂ ಕೇಳಿಸಬಾರದೆಂದು
ಬಿಕ್ಕಿದವರು ಯಾರು ಏಕಾಂತದಲ್ಲಿ ದುಃಖಗಳ?
ಅಳಿಸಿ ಹಾಕುತ್ತ ಹೋದವರು ಯಾರು
ತಮ್ಮ ಎಲ್ಲ ಗುರುತುಗಳ?

ಗಾಳಿಯಾದರೋ ಈಗ ತಣ್ಣಗಾಗಿದೆ
ಬೇರೆ ಸಮುದ್ರಗಳ ಬೇರೆ
ಆಘಾತಗಳ ನೆನಪು ತರುತ್ತಿದೆ
ಯುಗಗಳಾಗಿವೆ ನಿದ್ರಿಸಿದೆ-
ನಿದ್ರಿಸುವುದಿದೆ
ನನ್ನ ಮೇರೆಗಳ ತಬ್ಬವುದಿದೆ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...