Home / ಕವನ / ಕವಿತೆ / ಸಮುದ್ರ

ಸಮುದ್ರ

ಸಮುದ್ರವಿಲ್ಲದ ಹೈದರಾಬಾದಿಗೆ ನಾನೇ ಸಮುದ್ರ-
ವೆಂದು ಹರಡಿದೆ ಆ ಮಹಾನಗರದ ಉದ್ದಗಲ
ತುಂಬಿ ಬೀದಿಗಳ ತುಂಬಿ ಕೇರಿಗಳ
ಒಳಗೊಳುವೆನೆಂದು ನನ್ನ ತಳಮಳದಲ್ಲಿ
ಅದರ ಕಳವಳ

ತಲ್ಲಣಗೊಳ್ಳುತ್ತ
ಕರೆದು ಕೈ ಚಾಚಿ
ತೆರೆದು ತೆರೆಬಿಚ್ಚಿ
ತೆರೆದರೂ ತೆರೆಯದ ಪ್ರಕ್ಷುಬ್ಧ ಚಿತ್ತ
ಗುಡಿ ಗೋಪುರ ಮಿನಾರಗಳ ಸುತ್ತ

ಸುತ್ತಿದೆನು ಮುತ್ತಿದೆನು
ಎಟುಕದ ಎತ್ತರದಲ್ಲಿ
ಮೋಡಗಳ ಬಿತ್ತಿದೆನು
ಅಂಗಡಿ ಜಗಲಿಗಳಲ್ಲಿ
ಮಸೀದಿ ಮೆಟ್ಟಿಲುಗಳಲ್ಲಿ
ಯಾರ ಮನೆಯಂಗಳದಲ್ಲಿ
ಎಲ್ಲೆಂದರಲ್ಲಿ
ನನ್ನ ಕನಸುಗಳ ಕೆತ್ತಿದೆನು
ಒಳಗೇ ಬತ್ತಿದೆನು

ಮುಸ್ಸಂಜೆಯ ಕತ್ತಲಲ್ಲಿ
ಹೆಕ್ಕಿದವರು ಯಾರು ಒಡೆದ ಚಿಪ್ಪಿಗಳ?
ಯಾರಿಗೂ ಕೇಳಿಸಬಾರದೆಂದು
ಬಿಕ್ಕಿದವರು ಯಾರು ಏಕಾಂತದಲ್ಲಿ ದುಃಖಗಳ?
ಅಳಿಸಿ ಹಾಕುತ್ತ ಹೋದವರು ಯಾರು
ತಮ್ಮ ಎಲ್ಲ ಗುರುತುಗಳ?

ಗಾಳಿಯಾದರೋ ಈಗ ತಣ್ಣಗಾಗಿದೆ
ಬೇರೆ ಸಮುದ್ರಗಳ ಬೇರೆ
ಆಘಾತಗಳ ನೆನಪು ತರುತ್ತಿದೆ
ಯುಗಗಳಾಗಿವೆ ನಿದ್ರಿಸಿದೆ-
ನಿದ್ರಿಸುವುದಿದೆ
ನನ್ನ ಮೇರೆಗಳ ತಬ್ಬವುದಿದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...