ಸಮುದ್ರ

ಸಮುದ್ರವಿಲ್ಲದ ಹೈದರಾಬಾದಿಗೆ ನಾನೇ ಸಮುದ್ರ-
ವೆಂದು ಹರಡಿದೆ ಆ ಮಹಾನಗರದ ಉದ್ದಗಲ
ತುಂಬಿ ಬೀದಿಗಳ ತುಂಬಿ ಕೇರಿಗಳ
ಒಳಗೊಳುವೆನೆಂದು ನನ್ನ ತಳಮಳದಲ್ಲಿ
ಅದರ ಕಳವಳ

ತಲ್ಲಣಗೊಳ್ಳುತ್ತ
ಕರೆದು ಕೈ ಚಾಚಿ
ತೆರೆದು ತೆರೆಬಿಚ್ಚಿ
ತೆರೆದರೂ ತೆರೆಯದ ಪ್ರಕ್ಷುಬ್ಧ ಚಿತ್ತ
ಗುಡಿ ಗೋಪುರ ಮಿನಾರಗಳ ಸುತ್ತ

ಸುತ್ತಿದೆನು ಮುತ್ತಿದೆನು
ಎಟುಕದ ಎತ್ತರದಲ್ಲಿ
ಮೋಡಗಳ ಬಿತ್ತಿದೆನು
ಅಂಗಡಿ ಜಗಲಿಗಳಲ್ಲಿ
ಮಸೀದಿ ಮೆಟ್ಟಿಲುಗಳಲ್ಲಿ
ಯಾರ ಮನೆಯಂಗಳದಲ್ಲಿ
ಎಲ್ಲೆಂದರಲ್ಲಿ
ನನ್ನ ಕನಸುಗಳ ಕೆತ್ತಿದೆನು
ಒಳಗೇ ಬತ್ತಿದೆನು

ಮುಸ್ಸಂಜೆಯ ಕತ್ತಲಲ್ಲಿ
ಹೆಕ್ಕಿದವರು ಯಾರು ಒಡೆದ ಚಿಪ್ಪಿಗಳ?
ಯಾರಿಗೂ ಕೇಳಿಸಬಾರದೆಂದು
ಬಿಕ್ಕಿದವರು ಯಾರು ಏಕಾಂತದಲ್ಲಿ ದುಃಖಗಳ?
ಅಳಿಸಿ ಹಾಕುತ್ತ ಹೋದವರು ಯಾರು
ತಮ್ಮ ಎಲ್ಲ ಗುರುತುಗಳ?

ಗಾಳಿಯಾದರೋ ಈಗ ತಣ್ಣಗಾಗಿದೆ
ಬೇರೆ ಸಮುದ್ರಗಳ ಬೇರೆ
ಆಘಾತಗಳ ನೆನಪು ತರುತ್ತಿದೆ
ಯುಗಗಳಾಗಿವೆ ನಿದ್ರಿಸಿದೆ-
ನಿದ್ರಿಸುವುದಿದೆ
ನನ್ನ ಮೇರೆಗಳ ತಬ್ಬವುದಿದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಡಿ.ಎಚ್. ಲಾರೆನ್ಸ್‍ನ “ಸನ್ಸ್ ಎಂಡ್ ಲವರ್‍ಸ್”
Next post ಗೋರಿಯಾಚೆಗಿನ ಮರ

ಸಣ್ಣ ಕತೆ

  • ಕನಸು ದಿಟವಾಯಿತು

    ಪ್ರಕರಣ ೨ ಸೂರ್ಯೋದಯವಾಯಿತು. ನಿತ್ಯ ಕರ್ಮಗಳನ್ನು ಮುಗಿಸಿಕೊಂಡು ಕಾಫಿ ಸೇವನೆಯನ್ನು ಮಾಡುತ್ತಾ ರಂಗಣ್ಣನು ಹೆಂಡತಿಗೆ ಕನಸಿನ ಸಮಾಚಾರವನ್ನು ತಿಳಿಸಿದನು. ಆಕೆ- ಸರಿ, ಇನ್ನು ಈ ಹುಚ್ಚೊಂದು ನಿಮಗೆ… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…