ಮನಸ್ಸಿದ್ದಲ್ಲಿ ಮರುಭೂಮಿ

ಕೆಲವೊಮ್ಮೆ ನಾನು ಭಾವಿಸುವೆನು
ಮರುಭೂಮಿಯೊಂದನು ಅದರೊಳಗೆ
ಸರೋವರವೊಂದ ನಿರ್ಮಿಸುವೆನು
ನೋಡಿದರೆ ನೀರು ಕನ್ನಡಿಯಷ್ಟು ನಿರಾಳ
ಅಲ್ಲಿ ಆಕಾಶಕ್ಕೆ ಎತ್ತರದಷ್ಟೆ ಆಳ

ಆಚೀಚೆ ಕಣ್ಣಳತೆಯುದ್ದಕೂ ಬರಿ ಮಳಲು
ದಿನದಿನವು ಬದಲಾಗುತ್ತ ನಿನ್ನೆ ನೋಡಿದ್ದು
ಇಂದು ಕಾಣಿಸದೆ ಇಂದಿರದಲ್ಲಿ ನಾಳೆ
ಮೂಡುತ್ತ-ಇಷ್ಟೊಂದು ಮಳಲ ಹಾದು
ಅಸಾಧ್ಯ ಯಾರೂ ನನ್ನ ಹುಡುಕುವುದು

ಹೀಗೆಂದು ಡೇರೆಯನೂರಿ ಹೊರಗಿಳಿದು
ತಾಳೆಬಾಳೆಗಳ ನಡುವೆ ಓಡಾಡಿ ಅಹಹಾ ಎಂದು
ರಾತ್ರಿಯಾಗುತ್ತಲೇ ಬೆಂಕಿ ಕಾಯಿಸುತ ಕುಳಿತರೆ
ಎಲಲ! ಕುಳಿತಿದ್ದಾರೆ ಅನೇಕ ಮಂದಿ ಸುತ್ತ
ನನಗಿಂತ ಹಿಂದೆಯೇ ಬಂದವರು ಇತ್ತ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಮರ ಕಲಾವಿದ ಸಪ್ದರ
Next post ಬದುಕು ಚಿಗುರುವುದೆಂದರೆ

ಸಣ್ಣ ಕತೆ

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

cheap jordans|wholesale air max|wholesale jordans|wholesale jewelry|wholesale jerseys