ಕವಿಯ ಅವಸ್ಥಾಭೇದಗಳು

ಮೊಟ್ಟೆಯಾಗಿ ಮೊದಲಿನವಸ್ಥೆ
ಆಗ ಪ್ರೇಮಗೀತೆಗಳಲ್ಲಿ
ವೀರ ಗಾಥೆಗಳಲ್ಲಿ
ಅವನ ಆಸ್ಥೆ

ಒಡೆದು ಆಗುವನು ಹುಳ
ಭಾರಿ ಕಳವಳಗೊಂಡು
ತನ್ನದಾಗಿಸಿಕೊಂಡು
ಜಗದ ದುಃಖಗಳ

ಕ್ರಮೇಣ ಸುತ್ತ ಕೋಶ-
ಬೆಳೆದು ಅಂತರ್ಮುಖಿ
ಸ್ವಾಂತ ಸುಖಿ
ನಿದ್ರಾವಸ್ಥೆಗೆ ವಶ

ನಾಲ್ಕನೆಯದೇ ಪತಂಗ
ಬಲಿತು ಪಕ್ಕೆ
ಬಣ್ಣ ಬಣ್ಣದ ರೆಕ್ಕೆ
ಹಾರುವುದಕ್ಕೆ ಮಿತಿಯಿರದ ರಂಗ

ಇನ್ನು ಕೆಲವರ ಬದುಕು
ಧಾವಿಸಿ ಬೆಳಕಿನತ್ತ
ಭಗ್ಗನುರಿಯುತ್ತ
ಕಾವ್ಯವಾಗುವುದು ನಿಜಕು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪೇಚಾಟದ ಪ್ರಸಂಗಗಳು
Next post ಸಮಾಧಿ ಯೋಗ

ಸಣ್ಣ ಕತೆ

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

cheap jordans|wholesale air max|wholesale jordans|wholesale jewelry|wholesale jerseys