ಇದ್ದವರು, ಇಲ್ಲದವರು

ಕೆಲಸವಿದ್ದವರು ಮಾತಾಡುತ್ತಾರೆ. ದಿನವೂ
ಅನೇಕ ಕಾಗದ ಪತ್ರಗಳಿಗೆ ಸಹಿ ಹಾಕುವುದರಿಂದ
ಬಹಳ ಬೇಗನೆ ಸುಸ್ತಾಗುತ್ತಾರೆ. ಪ್ರತಿ ಮುಂಜಾನೆ
ನುಣುಪಾಗಿ ಗಡ್ಡ ಹರೆಯುವ ಇವರ
ಮುಂದಿನ ಜೇಬಿನಲ್ಲಿ ಸೀಸನ್ ಟಿಕೇಟು
ಹಿಂದಿನದರಲ್ಲಿ ಬಾಚಣಿಗೆ

ಇಲ್ಲದವರು ಮೌನವಾಗಿದ್ದಾರೆ. ಬೀದಿ ಬದಿಯ
ಅಂಗಡಿಗಳ ಮುಂದೆ ನಿಲ್ಲುತ್ತಾರೆ. ಉದ್ದೇಶವಿಲ್ಲದೆ
ನೋಡುತ್ತಾರೆ. ಯಥೇಷ್ಟ ಕೂದಲು ಬೆಳೆಸಿದ ಇವರು
ಭಯೋತ್ಪಾದಕರಂತೆ ಕಾಣಿಸುತ್ತಾರೆ
ಎಲ್ಲರೂ ಹೆದರುತ್ತಾರೆ.

ಜನದಟ್ಟಣೆಯ ಸುಲ್ತಾನ್ ಬಜಾರಿನಲ್ಲಿ ಸಂಜೆ
ನಡೆಯದವರು ಯಾರು? ಒಬ್ಬರನ್ನೊಬ್ಬರು ತಳ್ಳುತ್ತ
ಹಿಂದೆ ಹಾಕುತ್ತ ಹಿಂಬಾಲಿಸುತ್ತ,
ಬೆಳಕಿಗೆ ಮುಖವೊಡ್ಡುತ್ತ

ಆದರೂ ಜನರನ್ನು ಜನರಿಂದ ಪ್ರತ್ಯೇಕಿಸುವ
ಆ ಸೀಸನ್ ಟಿಕೇಟು ಮತ್ತು ಬಾಚಣಿಗೆ-
ಯಿದೆ ನೋಡಿ! ಅದು ಕಠಿಣ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೨
Next post ಜೋಲಿಯಾಟದ ಜಗತ್ತು

ಸಣ್ಣ ಕತೆ

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…