ಇದ್ದವರು, ಇಲ್ಲದವರು

ಕೆಲಸವಿದ್ದವರು ಮಾತಾಡುತ್ತಾರೆ. ದಿನವೂ
ಅನೇಕ ಕಾಗದ ಪತ್ರಗಳಿಗೆ ಸಹಿ ಹಾಕುವುದರಿಂದ
ಬಹಳ ಬೇಗನೆ ಸುಸ್ತಾಗುತ್ತಾರೆ. ಪ್ರತಿ ಮುಂಜಾನೆ
ನುಣುಪಾಗಿ ಗಡ್ಡ ಹರೆಯುವ ಇವರ
ಮುಂದಿನ ಜೇಬಿನಲ್ಲಿ ಸೀಸನ್ ಟಿಕೇಟು
ಹಿಂದಿನದರಲ್ಲಿ ಬಾಚಣಿಗೆ

ಇಲ್ಲದವರು ಮೌನವಾಗಿದ್ದಾರೆ. ಬೀದಿ ಬದಿಯ
ಅಂಗಡಿಗಳ ಮುಂದೆ ನಿಲ್ಲುತ್ತಾರೆ. ಉದ್ದೇಶವಿಲ್ಲದೆ
ನೋಡುತ್ತಾರೆ. ಯಥೇಷ್ಟ ಕೂದಲು ಬೆಳೆಸಿದ ಇವರು
ಭಯೋತ್ಪಾದಕರಂತೆ ಕಾಣಿಸುತ್ತಾರೆ
ಎಲ್ಲರೂ ಹೆದರುತ್ತಾರೆ.

ಜನದಟ್ಟಣೆಯ ಸುಲ್ತಾನ್ ಬಜಾರಿನಲ್ಲಿ ಸಂಜೆ
ನಡೆಯದವರು ಯಾರು? ಒಬ್ಬರನ್ನೊಬ್ಬರು ತಳ್ಳುತ್ತ
ಹಿಂದೆ ಹಾಕುತ್ತ ಹಿಂಬಾಲಿಸುತ್ತ,
ಬೆಳಕಿಗೆ ಮುಖವೊಡ್ಡುತ್ತ

ಆದರೂ ಜನರನ್ನು ಜನರಿಂದ ಪ್ರತ್ಯೇಕಿಸುವ
ಆ ಸೀಸನ್ ಟಿಕೇಟು ಮತ್ತು ಬಾಚಣಿಗೆ-
ಯಿದೆ ನೋಡಿ! ಅದು ಕಠಿಣ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೨
Next post ಜೋಲಿಯಾಟದ ಜಗತ್ತು

ಸಣ್ಣ ಕತೆ

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…