ಸಾಹಿತ್ಯದಿಂದ ಯಾರೇನು ಬಯಸುತ್ತಾರೆ?

ಸರಕಾರ ಬಯಸುತ್ತದೆ ಭಾವೈಕ್ಯ ಹಾಗೂ ರಾಷ್ಟ್ರಭಕ್ತಿ
ಆಸ್ತಿಕ ಮಹಾಶಯರು ಬಯಸುತ್ತಾರೆ ಭವಬಂಧದಿಂದ ಮುಕ್ತಿ
ಅಮೇರಿಕ ಮತ್ತು ರಷ್ಯ ಪರಸ್ಪರ ಧ್ವಂಸಗೊಳಿಸುವ ಅಸ್ತ್ರ
ಬಡ ದೇಶಗಳು ಬಯಸುತ್ತವೆ ಅನ್ನ ಮತ್ತು ವಸ್ತ್ರ
ವಿಮರ್ಶಕರು ಬಯಸುತ್ತಾರೆ ಸಾಮಾಜಿಕ ಹೊಣೆ
ಓದುಗರು ಬಯಸುತ್ತಾರೆ ಕಲ್ಪನೆಯ ಕವಣೆ
ಆಹ! ಬಯಸುತ್ತಾರೆ ಕೆಲವು ಲೇಖಕರು ಬರಿ ಕೀರ್ತಿ
ಇನ್ನು ಕೆಲವರು ಮುಗ್ಧ ಹೆಣ್ಣುಗಳಿಂದ ಸ್ಫೂರ್ತಿ
ಅಡಿಗರು ಬಯಸುತ್ತಾರೆ ಇಂದಿರಾ ಗಾಂಧಿಯ ವಿನಾಶ
ಹಾಗೂ ಶ್ರೀರಾಮಚಂದ್ರನಾಳಿದ ಸನಾತನ ದೇಶ
ಓದಲು ಬಾರದ ಹಳ್ಳಿಗರು ಬಯಸುತ್ತಾರೆ ಕಾಲಕಾಲಕ್ಕೆ ಮಳೆ
ಬಿತ್ತಿದ ಗದ್ದೆಗಳಲ್ಲಿ ತಿಂದು ಮುಗಿಯದಷ್ಟು ಬೆಳೆ

ಬಯಸುತ್ತಾರೆ! ಬಯಸುತ್ತಾರೆ! ಬಯಸದೆ ಇರುತ್ತಾರೆಯೆ?
ವೈಣಿಕರು ಬಯಸುತ್ತಾರೆ ಅಪರೂಪದ ರಾಗಗಳನ್ನು ವೈದ್ಯರು
ಬಯಸುತ್ತಾರೆ ಸಾಂಕ್ರಾಮಿಕ ರೋಗಗಳನ್ನು ದಾಮರು ಹಾಕುವವರು
ಬಯಸುತ್ತಾರೆ ದಟ್ಟ ನೆರಳಿನ ಮರಗಳನ್ನು ತಪಸ್ಸಿಗೆ ಕೂತ
ಭಕ್ತರು ಬಯಸುತ್ತಾರೆ ಕೋರಿದ ವರಗಳನ್ನು ಕೃಷಿಕರು
ಬಯಸುತ್ತಾರೆ ಫಲವತ್ತಾದ ಮಣ್ಣುಗಳನ್ನು ಅರೇಬಿಯದ ಶೇಖರು
ಬಯಸುತ್ತಾರೆ ಪ್ರತಿದಿನವೂ ಹೊಸ ಹೆಣ್ಣುಗಳನ್ನು ಕಾಸರಗೋಡಿನ
ಕನ್ನಡಿಗರು ಬಯಸುತ್ತಾರೆ ಕರ್ನಾಟಕದೊಂದಿಗೆ ಸೇರಿಕೆಯನ್ನು
ವ್ಯಾಪಾರಿಗಳು ಬಯಸುತ್ತಾರೆ ಸಕಲವಸ್ತುಗಳಿಗೂ ಬೆಲೆಯೇರಿಕೆಯನ್ನು
ಆಜನ್ಮ ಬ್ರಹ್ಮಚಾರಿಗಳು ಬಯಸುತ್ತಾರೆ ವೀರ್ಯನಿಗ್ರಹವನ್ನು
ಚೋರರು ಬಯಸುತ್ತಾರೆ ಕಂಚಿಕಾಮಾಕ್ಷಿಯ ವಿಗ್ರಹವನ್ನು
ಬಯಸುತ್ತಾರೆ! ಬಯಸುತ್ತಾರೆ! ಬಯಸದೆ ಇರುತ್ತಾರೆಯೆ ?

ಸರಕಾರ ಬಯಸುತ್ತದೆ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಿಮ್ಮ ಕುರಿತು ಅಭಿಪ್ರಾಯ
Next post ರಾತ್ರಿಯಲ್ಲಿ ಹಗಲಿನ ಪಾಳಿ

ಸಣ್ಣ ಕತೆ

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

cheap jordans|wholesale air max|wholesale jordans|wholesale jewelry|wholesale jerseys