Home / ಕವನ / ಕವಿತೆ / ಸಾಹಿತ್ಯದಿಂದ ಯಾರೇನು ಬಯಸುತ್ತಾರೆ?

ಸಾಹಿತ್ಯದಿಂದ ಯಾರೇನು ಬಯಸುತ್ತಾರೆ?

ಸರಕಾರ ಬಯಸುತ್ತದೆ ಭಾವೈಕ್ಯ ಹಾಗೂ ರಾಷ್ಟ್ರಭಕ್ತಿ
ಆಸ್ತಿಕ ಮಹಾಶಯರು ಬಯಸುತ್ತಾರೆ ಭವಬಂಧದಿಂದ ಮುಕ್ತಿ
ಅಮೇರಿಕ ಮತ್ತು ರಷ್ಯ ಪರಸ್ಪರ ಧ್ವಂಸಗೊಳಿಸುವ ಅಸ್ತ್ರ
ಬಡ ದೇಶಗಳು ಬಯಸುತ್ತವೆ ಅನ್ನ ಮತ್ತು ವಸ್ತ್ರ
ವಿಮರ್ಶಕರು ಬಯಸುತ್ತಾರೆ ಸಾಮಾಜಿಕ ಹೊಣೆ
ಓದುಗರು ಬಯಸುತ್ತಾರೆ ಕಲ್ಪನೆಯ ಕವಣೆ
ಆಹ! ಬಯಸುತ್ತಾರೆ ಕೆಲವು ಲೇಖಕರು ಬರಿ ಕೀರ್ತಿ
ಇನ್ನು ಕೆಲವರು ಮುಗ್ಧ ಹೆಣ್ಣುಗಳಿಂದ ಸ್ಫೂರ್ತಿ
ಅಡಿಗರು ಬಯಸುತ್ತಾರೆ ಇಂದಿರಾ ಗಾಂಧಿಯ ವಿನಾಶ
ಹಾಗೂ ಶ್ರೀರಾಮಚಂದ್ರನಾಳಿದ ಸನಾತನ ದೇಶ
ಓದಲು ಬಾರದ ಹಳ್ಳಿಗರು ಬಯಸುತ್ತಾರೆ ಕಾಲಕಾಲಕ್ಕೆ ಮಳೆ
ಬಿತ್ತಿದ ಗದ್ದೆಗಳಲ್ಲಿ ತಿಂದು ಮುಗಿಯದಷ್ಟು ಬೆಳೆ

ಬಯಸುತ್ತಾರೆ! ಬಯಸುತ್ತಾರೆ! ಬಯಸದೆ ಇರುತ್ತಾರೆಯೆ?
ವೈಣಿಕರು ಬಯಸುತ್ತಾರೆ ಅಪರೂಪದ ರಾಗಗಳನ್ನು ವೈದ್ಯರು
ಬಯಸುತ್ತಾರೆ ಸಾಂಕ್ರಾಮಿಕ ರೋಗಗಳನ್ನು ದಾಮರು ಹಾಕುವವರು
ಬಯಸುತ್ತಾರೆ ದಟ್ಟ ನೆರಳಿನ ಮರಗಳನ್ನು ತಪಸ್ಸಿಗೆ ಕೂತ
ಭಕ್ತರು ಬಯಸುತ್ತಾರೆ ಕೋರಿದ ವರಗಳನ್ನು ಕೃಷಿಕರು
ಬಯಸುತ್ತಾರೆ ಫಲವತ್ತಾದ ಮಣ್ಣುಗಳನ್ನು ಅರೇಬಿಯದ ಶೇಖರು
ಬಯಸುತ್ತಾರೆ ಪ್ರತಿದಿನವೂ ಹೊಸ ಹೆಣ್ಣುಗಳನ್ನು ಕಾಸರಗೋಡಿನ
ಕನ್ನಡಿಗರು ಬಯಸುತ್ತಾರೆ ಕರ್ನಾಟಕದೊಂದಿಗೆ ಸೇರಿಕೆಯನ್ನು
ವ್ಯಾಪಾರಿಗಳು ಬಯಸುತ್ತಾರೆ ಸಕಲವಸ್ತುಗಳಿಗೂ ಬೆಲೆಯೇರಿಕೆಯನ್ನು
ಆಜನ್ಮ ಬ್ರಹ್ಮಚಾರಿಗಳು ಬಯಸುತ್ತಾರೆ ವೀರ್ಯನಿಗ್ರಹವನ್ನು
ಚೋರರು ಬಯಸುತ್ತಾರೆ ಕಂಚಿಕಾಮಾಕ್ಷಿಯ ವಿಗ್ರಹವನ್ನು
ಬಯಸುತ್ತಾರೆ! ಬಯಸುತ್ತಾರೆ! ಬಯಸದೆ ಇರುತ್ತಾರೆಯೆ ?

ಸರಕಾರ ಬಯಸುತ್ತದೆ!
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...