Home / ಕವನ / ಕವಿತೆ / ಸಾಹಿತ್ಯದಿಂದ ಯಾರೇನು ಬಯಸುತ್ತಾರೆ?

ಸಾಹಿತ್ಯದಿಂದ ಯಾರೇನು ಬಯಸುತ್ತಾರೆ?

ಸರಕಾರ ಬಯಸುತ್ತದೆ ಭಾವೈಕ್ಯ ಹಾಗೂ ರಾಷ್ಟ್ರಭಕ್ತಿ
ಆಸ್ತಿಕ ಮಹಾಶಯರು ಬಯಸುತ್ತಾರೆ ಭವಬಂಧದಿಂದ ಮುಕ್ತಿ
ಅಮೇರಿಕ ಮತ್ತು ರಷ್ಯ ಪರಸ್ಪರ ಧ್ವಂಸಗೊಳಿಸುವ ಅಸ್ತ್ರ
ಬಡ ದೇಶಗಳು ಬಯಸುತ್ತವೆ ಅನ್ನ ಮತ್ತು ವಸ್ತ್ರ
ವಿಮರ್ಶಕರು ಬಯಸುತ್ತಾರೆ ಸಾಮಾಜಿಕ ಹೊಣೆ
ಓದುಗರು ಬಯಸುತ್ತಾರೆ ಕಲ್ಪನೆಯ ಕವಣೆ
ಆಹ! ಬಯಸುತ್ತಾರೆ ಕೆಲವು ಲೇಖಕರು ಬರಿ ಕೀರ್ತಿ
ಇನ್ನು ಕೆಲವರು ಮುಗ್ಧ ಹೆಣ್ಣುಗಳಿಂದ ಸ್ಫೂರ್ತಿ
ಅಡಿಗರು ಬಯಸುತ್ತಾರೆ ಇಂದಿರಾ ಗಾಂಧಿಯ ವಿನಾಶ
ಹಾಗೂ ಶ್ರೀರಾಮಚಂದ್ರನಾಳಿದ ಸನಾತನ ದೇಶ
ಓದಲು ಬಾರದ ಹಳ್ಳಿಗರು ಬಯಸುತ್ತಾರೆ ಕಾಲಕಾಲಕ್ಕೆ ಮಳೆ
ಬಿತ್ತಿದ ಗದ್ದೆಗಳಲ್ಲಿ ತಿಂದು ಮುಗಿಯದಷ್ಟು ಬೆಳೆ

ಬಯಸುತ್ತಾರೆ! ಬಯಸುತ್ತಾರೆ! ಬಯಸದೆ ಇರುತ್ತಾರೆಯೆ?
ವೈಣಿಕರು ಬಯಸುತ್ತಾರೆ ಅಪರೂಪದ ರಾಗಗಳನ್ನು ವೈದ್ಯರು
ಬಯಸುತ್ತಾರೆ ಸಾಂಕ್ರಾಮಿಕ ರೋಗಗಳನ್ನು ದಾಮರು ಹಾಕುವವರು
ಬಯಸುತ್ತಾರೆ ದಟ್ಟ ನೆರಳಿನ ಮರಗಳನ್ನು ತಪಸ್ಸಿಗೆ ಕೂತ
ಭಕ್ತರು ಬಯಸುತ್ತಾರೆ ಕೋರಿದ ವರಗಳನ್ನು ಕೃಷಿಕರು
ಬಯಸುತ್ತಾರೆ ಫಲವತ್ತಾದ ಮಣ್ಣುಗಳನ್ನು ಅರೇಬಿಯದ ಶೇಖರು
ಬಯಸುತ್ತಾರೆ ಪ್ರತಿದಿನವೂ ಹೊಸ ಹೆಣ್ಣುಗಳನ್ನು ಕಾಸರಗೋಡಿನ
ಕನ್ನಡಿಗರು ಬಯಸುತ್ತಾರೆ ಕರ್ನಾಟಕದೊಂದಿಗೆ ಸೇರಿಕೆಯನ್ನು
ವ್ಯಾಪಾರಿಗಳು ಬಯಸುತ್ತಾರೆ ಸಕಲವಸ್ತುಗಳಿಗೂ ಬೆಲೆಯೇರಿಕೆಯನ್ನು
ಆಜನ್ಮ ಬ್ರಹ್ಮಚಾರಿಗಳು ಬಯಸುತ್ತಾರೆ ವೀರ್ಯನಿಗ್ರಹವನ್ನು
ಚೋರರು ಬಯಸುತ್ತಾರೆ ಕಂಚಿಕಾಮಾಕ್ಷಿಯ ವಿಗ್ರಹವನ್ನು
ಬಯಸುತ್ತಾರೆ! ಬಯಸುತ್ತಾರೆ! ಬಯಸದೆ ಇರುತ್ತಾರೆಯೆ ?

ಸರಕಾರ ಬಯಸುತ್ತದೆ!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...