ಮರೀನಾದಲ್ಲಿ ಕವಿ

ಮಸಾಲೆ ಕಡಲೆ ಜಗಿಯುತ್ತ
ಸೌತೆ ಚೂರು ಮೆಲ್ಲುತ್ತ
ಕಾಲೆಳೆಯುತ್ತ ಉಸುಕಿನಲ್ಲಿ
ಮೂರು ಸಂಜೆಯ ಬೆಳಕಿನಲ್ಲಿ
ಕವಿಯಿದ್ದಾನೆ ಎಲ್ಲರ ಹಾಗೆ
ಕವಿಗಳಿರೋದೇ ಹಾಗೆ

ಉಪ್ಪಿನ ಹವೆಗೆ ಒಪ್ಪಿಸಿಕೊಂಡು
ಭಿಕ್ಷುಕರಿಂದ ತಪ್ಪಿಸಿಕೊಂಡು
ಕಡಲಿನ ರಾಗವ ಹಿಡಿಯುತ್ತ
ಬಡವರಿಗಾಗಿ ಮರುಗುತ್ತ
ಕವಿಯಿದ್ದಾನೆ ಎಲ್ಲರ ಹಾಗೆ
ಕವಿಗಳಿರೋದೇ ಹಾಗೆ

ತೆರೆಗಳು ಎಂದೂ ನಿಲ್ಲವು ಎಂದು
ಲೋಕದ ದಂಧೆ ನೀಗದು ಎಂದು
ಸುಸ್ತಾದಾಗ ಒರಗುತ್ತ
ನಕ್ಷತ್ರಗಳ ಎಣಿಸುತ್ತ
ಕವಿಯಿದ್ದಾನೆ ಎಲ್ಲರ ಹಾಗೆ
ಕವಿಗಳಿರೋದೇ ಹಾಗೆ

ಕಳಚಿದ ಚಪ್ಪಲಿ ಸಿಕ್ಕಿಸಿಕೊಂಡು
ಹತ್ತಿದ ಮಳಲನು ಜಾಡಿಸಿಕೊಂಡು
ಯಾವ ಯಾವದೋ ಕನಸಿನಲ್ಲಿ
ಅದೆಷ್ಟೋ ಮಂದಿಯ ಹೆಜ್ಜೆಯಲ್ಲಿ
ಕವಿಯಿದ್ದಾನೆ ಎಲ್ಲರ ಹಾಗೆ
ಕವಿಗಳಿರೋದೇ ಹಾಗೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸೌಂದರ್ಯದ ಉದ್ಯಮ, ಸೌಂದರ್ಯದ ರಾಜಕೀಯ
Next post ಹೇಂಟೆಯ ಕವಿತೆ

ಸಣ್ಣ ಕತೆ

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

cheap jordans|wholesale air max|wholesale jordans|wholesale jewelry|wholesale jerseys