Home / ಕವನ / ಕವಿತೆ / ಸರಿಗಾಣೆನು ಧರಣಿಯೊಳಗಮ್ಮ

ಸರಿಗಾಣೆನು ಧರಣಿಯೊಳಗಮ್ಮ

ಸರಿಗಾಣೆನು ಧರಣಿಯೊಳಗಮ್ಮ ಕರುಣೆ ಎಲ್ಲಮ್ಮ ||ಪ||

ಏನು ಹೇಳಲಿ ನಿನ್ನ ಕೌತುಕವ ನೀನಾದಿಯಲ್ಲಿ ತುಂಬಿ ತುಳುಕಿದಿ
ಏಕೆಂಬ ಭಾವ ||ಅ.ಪ.||

ಪ್ರಥಮ ಕೃತಯುಗದಲ್ಲಿ ಪರಶಿವಗೆ ಸತಿಯಾಗಿ ನೀನು
ನಿತ್ಯ ಮೆರೆದೆ ರಜತಗಿರಿಯೊಳಗೆ
ಕೃತಕ ಮದುಕೈಟಭರ ಪ್ರಾಣ ಹತವ ಮಾಡಿದಿ ಯುದ್ಧ ಮುಖದಲಿ
ಹಿತವು ತೋರಿದಿ ಸುರರ ಸಮೂಹಕೆ ಪ್ರತಿಯು ಉಂಟೆ
ನಿನ್ನ ಮಹಾತ್ಮೆಗೆ? ||೧||

ತ್ರೇತಾಯುಗದಲ್ಲಿ ಭೂಮಿಯೊಳು ಜನಿಸಿ ರಾಘವನ ಸ್ತ್ರೀಯೆನಿಸಿ
ಕೋತಿ ಬಳಗವ ಕೂಡಿಕೊಂಡು ಸೇತುಬಂಧನ ಕಟ್ಟಿ ಕಲಹದಿ
ಪಾತಕಿ ರಾವಣನ ಕುಲವನು ನಾಶಮಾಡಿಸಿದೆಲ್ಲ ತತ್ವದಿ ||೨||

ದ್ವಾಪರ ಯುಗದಲ್ಲಿ ದೃಪದನಿಗೆ ನೀ ಪುತ್ರಿಯಾಗಿ
ಪತ್ನಿಯಾದೆ ಪಂಚಪಾಂಡವರಿಗೆ
ಪಾಪಿ ಕೌರವ ಕರ್ಣ ದುಶ್ಯಾಸನರು ತಾಪಕೊಡಲು ನಿನ್ನ ಜನ್ಮಕೆ
ಕೋಪ ಜ್ವಾಲೆಯ ತಾಳಿ ನರಕದ ಕೂಪದೊಳು
ಕುರುಕುಲವ ಕೆಡುಹಿದಿ ||೩||

ಕಲಿಯುಗದೊಳಗಾದಿ ಎಲ್ಲಮ್ಮ ಸುಲಲಿತದಿ
ಜಮದಗ್ನಿ ಋಷಿಗೆ ಭಾರ್ಯಳಾದೆಮ್ಮ
ಕಲಹಕಾರಿ ಕಾರ್ತಿವೀರ್ಯನ ತಲೆಯ ಕೊಯ್ಸಿಬಿಟ್ಟಿಯಮ್ಮ
ಖಲಿಂದರ ಶಿಶುನಾಳಧೀಶಗ ಒಲಿದು ಪ್ರಿಯ ಮಾತೆಯಾದೆ
ಸರಿಗಾಣೆ ಧರಣಿಯೊಳಗಮ್ಮ ||೪||

* * * *

Tagged:

Leave a Reply

Your email address will not be published. Required fields are marked *

ಲಲಿತೆ ಬಾಲವಿದವೆ. ಮದುವೆಯಾದ ಮೂರು ತಿಂಗಳಿಗೆ ಗಂಡ ಸಿಡುಬಿನಲ್ಲಿ ಸತ್ತ. ಲಲಿತೆ ಕುಂಕುಮವಳಿಸಿದಳು. ಒಂದೆರಡು ತಿಂಗಳ ನಂತರ ಕಣ್ಣೀರನ್ನೊರೆಸಿ ಮುಖ ತೊಳೆದುಕೊಂಡು ತನ್ನ ವಿದ್ಯಾಭ್ಯಾಸವನ್ನು ಮುಂದುವರಿಸಿದಳು. ಅವಳು ಆಗ ತಾನೇ ಇಂಟಿರ್‌ ಮೀಡಿಯಟ್‌ ಪಾಸುಮಾಡಿದ್ದಳು. ಎಂ. ಬಿ. ಬಿ. ಎಸ್...

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...