ನನ್ನೊಳಗೆ ನೀನಿದ್ದೆ

ಅರಿವಾಗಲೇ ಇಲ್ಲ ನನ್ನೊಳಗೆ ನೀನಿದ್ದೆ.
ಕಂಡಕಂಡಲ್ಲಿ ಕಾಡು ಮೇಡಲ್ಲಿ
ನಾಡಬೀಡಲ್ಲಿ ನಿನ್ನರಸಿ ಅಲೆದೆ.

ಕಣ್ಣಿನಾಳದ ಬಿಂಬದೊಳು
ಒಳಬಿಂಬವಾಗಿ ನೀನಿದ್ದೆ.
ಬಿಂಬಕ್ಕೆ ಇಂಬು ನಾನಾಗಿದ್ದು ತಿಳಿದಿರಲಿಲ್ಲ

ಮುಷ್ಟಿಯೊಳಗಣ ಸೃಷ್ಟಿ ನೀನಾಗಿದ್ದೆ
ಕರದೊಳಗಣ ಕಮಲ
ಕಾಡು ಕುಸುಮವೆಂದು ಬಗೆದೆ.

ಚರಣಕ್ಕೆ ಚೈತನ್ಯ ನೀನಾಗಿದ್ದೆ
ಅಷ್ಟದಿಕ್ಕುಗಳ ವಿಶಿಷ್ಟಬಲ
ನನ್ನಡಿಗಳಲ್ಲಿ ಹೇಗೆಂದು
ಶಂಕಿಸಿದೆ,

ರಕ್ತದೊಳಗಿನ ಕಣಕಣವೂ ನೀನಾಗಿದ್ದೆ.
ಅನ್ಯ ರಸದ ಗೋಜಿರಲಿಲ್ಲ.
ಹೃದಯ ಮಿಡಿತಕ್ಕೆ
ಮೆದುಳ ತಂತುಗಳ ಒರತೆ ನೀನಾಗಿದ್ದೆ.

ಮನದ ತುಡಿತಕ್ಕೆ ಪ್ರೇಮ ಸ್ಖಲಿತವೂ
ನೀನಾಗಿದ್ದೆ. ಅರಿವಾಗಲೇ ಇಲ್ಲ.
ನನ್ನೊಳಗೆ ನೀನಿದ್ದೆ.
ಸುಮ್ಮನೆ ನಿನ್ನರಸಿ ಅಲೆದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಒಬ್ಬ ವಿಯೆಟ್ನಾಮೀ ಸುಂದರಿಗೆ
Next post ಉಘೇ

ಸಣ್ಣ ಕತೆ

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

cheap jordans|wholesale air max|wholesale jordans|wholesale jewelry|wholesale jerseys