Home / ಲೇಖನ / ಇತರೆ / ಮತಾಂತರ – ಒಂದು ಪ್ರತಿಕ್ರಿಯೆ

ಮತಾಂತರ – ಒಂದು ಪ್ರತಿಕ್ರಿಯೆ

ನೋಡಿ, ಮತಾಂತರ ಅನ್ನೋದು- ಆದು ವೈಯಕ್ತಿಕವೋ, ಸಾಮೂಹಿಕವೋ- ಆರೋಗಯಕರ ಅಲ್ಲ. ಮತಾನೇ ತೊಲಗಬೇಕು ಅನ್ನೋ ಈ ವೈಜ್ಞಾನಿಕ ಯುಗದಲ್ಲಿ ನನಗೆ ಇದೊಂದು ಹಾಸ್ಯ.

ಹರಿಜನರು ಮುಸ್ಲಿಮರಾದರೆ ಆರ್. ಎಸ್. ಎಸ್, ಪೇಜಾವರ ಸ್ವಾಮಿಗೆ, ವಿಶ್ವ ಹಿಂದೂ ಪರಿಷತ್ತಿನವರಿಗೆ ತಮ್ಮ ಅಸ್ತಿತ್ವಾನೆ ಹೋದಂಗಾಗ್ತದೆ. ಏಕೆ? ನಿತ್ಯ ಜೀವನದಲ್ಲಿ ಹರಿಜನರ ಸ್ಥಾನಮಾನದ ಬಗ್ಗೆ ತಿರಸ್ಕಾರ ಹೊಂದಿರೊ ಇವರಿಗೆ ಮತಾಂತರದಿಂದ ತಮ್ಮ ಕುಳಿತು ತಿನ್ನುವ ಸ್ಥಿತಿಗೆ ಎಲ್ಲಿ ಧಕ್ಕೆ ಬರುತ್ತೋ ಎನ್ನುವ ಭಯ. ಆದ್ದರಿಂದ ಮೊಗವಾಡ ಹಾಕಿಕೊಂಡು ಭಾರತೀಯ ಸಂಸೃತಿ, ಭಾರತರಾಷ್ಟ್ರ, ಹಿಂದೂರಾಷ್ಟ್ರ ಅಂತ ಏನೋ ಕಂಡು ಬೊಳ್ಳು ಹಾಕೋ ನಾಯಿ ಹಂಗೆ ಬೊಳ್ಳು ಹಾಕ್ತಾರೆ.

ಮತಾಂತರ ಆದಾಗ ಹರಿಜನರು ತಮ್ಮ ಸ್ವಜನ ಬಂಧುಗಳೆ ಎನ್ನುವ ಹುನ್ನಾರದ ನಾಟಕ ಹೂಡೋ ಈ ಜನ ಇಡೀ ಸಮಾಜಕ್ಕಷ್ಟೆ ಅಲ್ಲ, ತಮಗೂ ಮೋಸಮಾಡಿಕೊಂಡು ದಿವಾಳಿಯಾಗ್ತಾರೆ. ದೇಶನ ಹರಾಜು ಹಾಕ್ತಾರೆ. ಕಾಲಕ್ಕೆ ತಕ್ಕ ಹಾಗೆ ಬಣ್ಣ ಬದಲಾಯಿಸೋ ಈ ಗೋಸುಂಬೆತನ ಇದೆಯಲ್ಲ ಅದು ಹೇಸಿಗೆ. ಅದಕ್ಕೂ ಹೆಚ್ಚಿನ ಹೇಸಿಗೆ ಅಂದ್ರೆ ಮತಾಂತರವ ಬಗ್ಗೆ ಮೌನವಾಗಿರೋ ಮುಸ್ಲಿಮರು, ಹಾಗೇ ಕ್ರಮೇಣ ಕೊಲ್ಲುವ ಕ್ರಿಶ್ಚಿಯನ್ನರು.

ಮತಾಂತರದ ಪರಿಣಾಮ ಏನು ಗೊತ್ತೆ? ಶೂದ್ರ ಜನಾಂಗ ಬಹು ಸಂಖ್ಯಾತರಾದ್ರು ಶಕ್ತರಾಗ್ದೆ ಬರಿಗೈಯಾಗೇ ಇರ್ತಾರೆ. ಅಲ್ಪಸಂಖ್ಯಾತರಾಗಿರೋ ಮುಸ್ಲಿಮರು ಆಳೋ ಅವಕಾಶ ಬಂದ್ರೆ ಆಗ ಈ ದೇಶದ ಸಂಸ್ಕೃತಿಯ ನೇತಾರರು ಎಂದು ಬೊಗಳೆ ಹೊಡಿಯೊ ಈ ಹಾರುವರು ಅವ್ರನ್ನೆ ಆಲಂಗಿಸಿಕೊಂಡು ಬಸಿರಾಗ್ತಾರೆ. ಇತಿಹಾಸ ಸರಿಯಾಗಿ ಓದ್ಕೊಂಡೋರಿಗೆ ಗೊತ್ತಾಗುತ್ತೆ, ಶೂದ್ರಮುಂಡೇವು ಆಗಲೂ ಅವರ ಕಾಲಡಿಗೆ ಬಿದ್ದು ಮತ್ತೆ ತುಳಿಸ್ಕೋತಾರೆ.

ಈ ಪುರೋಹಿತಶಾಹಿ – ಅದು ಯಾವ ಮತದ್ದೇ ಆಗಿರಲಿ – ಹಾಗೂ ಬ್ರಾಹ್ಮಣ್ಯಕ್ಕೆ ಮೂಗುದಾರ ಹಾಕಬೇಕಾದರೆ ಮತಾಂತರ ಮಾಡಿದ್ರೆ ಆಗೊಲ್ಲ. ಮೆದುಳಿನಲ್ಡಿ ಬುದ್ಧಿ ಬೆಳೆಸ್ಕೋಬೇಕು; ಎದೆಗಟ್ಟಿ ಮಾಡ್ಕೋಬೇಕು. ರಟ್ಟೆಗಟ್ಟಿ ಜೊತೆ ಬುದ್ಧಿ ಬಲಗೊಂಡರೆ ಮಾತ್ರ ಇಲ್ಲಿ ಮನುಷ್ಯರು ಮನುಷ್ಯರಾಗಿ ಬದುಕೋ ಹಾಗೆ ಮಾಡೋಕೆ ಸಾಧ್ಯ ಆಗ್ತದೆ.

ಮನುಷ್ಯ ಮನುಷ್ಯರಲ್ಲಿ ಜೀವ ಜೀವದ ಭೇದ ಹುಟ್ಟಿ ಹಾಕೋ ಈ ಮತಾನ ಒಮ್ಮೆಲೇ ಓಡಿಸಬೇಕು. ನೋಡಿ ಈ ಜಗತ್ತಿಗೆ ಬಂದ ಜೀವ ತನಗೆ ತಾನೆ ಬೆಳೆದು ಗಟ್ಟಿಯಾಗ್ದೆ ಹೋದ್ರೆ ಅದನ್ನ ಮತ ಮೌಢ್ಯ ಮೆಟ್ಟಿನಿಲ್ತಾವೆ. ಶಕ್ತಿ ಇಲ್ದಿದ್ರೆ ಕಾನೂನು ಕಾಪಾಡೊಲ್ಲ. ಸಾಮಾಜಿಕವಾಗಿ ಮನುಷ್ಯ ಎದುರಿಸುತ್ತಿರುವ ಸಮಸ್ಯೆಗೆ ಮತಾಂತರ ಎಂದೂ ಮದ್ದಾಗಲ್ಲ. ಅದು ತತ್ಕಾಲದ ಬೆದರಿಕೆ ಆಗಬಹುದು. ಮತಾಂತರ ಅನ್ನೋದು, ಹೇಸಿಗೆ ಅಂತ ಒಂದರಿಂದ ಬಿಡಿಸಿಕೊಂಡು ಮತ್ತೊಂದು ಹೇಸಿಗೆಯನ್ನ ಆಲಂಗಿಸಿಕೊಳ್ಳುವುದಷ್ಟೆ. ಅಲ್ಲಿ ಬುದ್ಧಿ ಬೆಳವಣಿಗೆಯ, ವ್ಯಕ್ತಿಯ ಗಟ್ಟಿತನ ವ್ಯಕ್ತವಾಗಲ್ಲ. ಆದ್ದರಿಂದ ಇರುವ ಸ್ಥಿತಿಗೆ ಮೂಲ ಕಂಡುಕೊಂಡು ಅದನ್ನು ತೊಡೆದು ಹಾಕುವ ಮನಸ್ಸಿನ ಬೆಳವಣಿಗೆಯಲ್ಲಿ ನಿಜವಾದ ಪರಿಹಾರ ಕಾಣಬಹುದು. ಸ್ವಶಕ್ತಿ, ಸ್ವಸಾಮರ್ಥ್ಯ ಇರದ ಜನರನ್ನ ಎಲ್ಲಿ ಹೋದರೂ ಗುಲಾಮರನ್ನಾಗಿಯೆ ಉಳಿಸಿಕೊಳ್ಳುವುದು ದುಷ್ಟ ವ್ಯವಸ್ಥೆಯ ಅಂತರಂಗ. ಆದ್ದರಿಂದ ಮತಾಂತರ ಸಮಸ್ಯೆಯ ಪರಿಹಾರವಾಗುವುದಿಲ್ಲ.

*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...