Home / ಲೇಖನ / ಇತರೆ / ಮತಾಂತರ – ಒಂದು ಪ್ರತಿಕ್ರಿಯೆ

ಮತಾಂತರ – ಒಂದು ಪ್ರತಿಕ್ರಿಯೆ

ನೋಡಿ, ಮತಾಂತರ ಅನ್ನೋದು- ಆದು ವೈಯಕ್ತಿಕವೋ, ಸಾಮೂಹಿಕವೋ- ಆರೋಗಯಕರ ಅಲ್ಲ. ಮತಾನೇ ತೊಲಗಬೇಕು ಅನ್ನೋ ಈ ವೈಜ್ಞಾನಿಕ ಯುಗದಲ್ಲಿ ನನಗೆ ಇದೊಂದು ಹಾಸ್ಯ.

ಹರಿಜನರು ಮುಸ್ಲಿಮರಾದರೆ ಆರ್. ಎಸ್. ಎಸ್, ಪೇಜಾವರ ಸ್ವಾಮಿಗೆ, ವಿಶ್ವ ಹಿಂದೂ ಪರಿಷತ್ತಿನವರಿಗೆ ತಮ್ಮ ಅಸ್ತಿತ್ವಾನೆ ಹೋದಂಗಾಗ್ತದೆ. ಏಕೆ? ನಿತ್ಯ ಜೀವನದಲ್ಲಿ ಹರಿಜನರ ಸ್ಥಾನಮಾನದ ಬಗ್ಗೆ ತಿರಸ್ಕಾರ ಹೊಂದಿರೊ ಇವರಿಗೆ ಮತಾಂತರದಿಂದ ತಮ್ಮ ಕುಳಿತು ತಿನ್ನುವ ಸ್ಥಿತಿಗೆ ಎಲ್ಲಿ ಧಕ್ಕೆ ಬರುತ್ತೋ ಎನ್ನುವ ಭಯ. ಆದ್ದರಿಂದ ಮೊಗವಾಡ ಹಾಕಿಕೊಂಡು ಭಾರತೀಯ ಸಂಸೃತಿ, ಭಾರತರಾಷ್ಟ್ರ, ಹಿಂದೂರಾಷ್ಟ್ರ ಅಂತ ಏನೋ ಕಂಡು ಬೊಳ್ಳು ಹಾಕೋ ನಾಯಿ ಹಂಗೆ ಬೊಳ್ಳು ಹಾಕ್ತಾರೆ.

ಮತಾಂತರ ಆದಾಗ ಹರಿಜನರು ತಮ್ಮ ಸ್ವಜನ ಬಂಧುಗಳೆ ಎನ್ನುವ ಹುನ್ನಾರದ ನಾಟಕ ಹೂಡೋ ಈ ಜನ ಇಡೀ ಸಮಾಜಕ್ಕಷ್ಟೆ ಅಲ್ಲ, ತಮಗೂ ಮೋಸಮಾಡಿಕೊಂಡು ದಿವಾಳಿಯಾಗ್ತಾರೆ. ದೇಶನ ಹರಾಜು ಹಾಕ್ತಾರೆ. ಕಾಲಕ್ಕೆ ತಕ್ಕ ಹಾಗೆ ಬಣ್ಣ ಬದಲಾಯಿಸೋ ಈ ಗೋಸುಂಬೆತನ ಇದೆಯಲ್ಲ ಅದು ಹೇಸಿಗೆ. ಅದಕ್ಕೂ ಹೆಚ್ಚಿನ ಹೇಸಿಗೆ ಅಂದ್ರೆ ಮತಾಂತರವ ಬಗ್ಗೆ ಮೌನವಾಗಿರೋ ಮುಸ್ಲಿಮರು, ಹಾಗೇ ಕ್ರಮೇಣ ಕೊಲ್ಲುವ ಕ್ರಿಶ್ಚಿಯನ್ನರು.

ಮತಾಂತರದ ಪರಿಣಾಮ ಏನು ಗೊತ್ತೆ? ಶೂದ್ರ ಜನಾಂಗ ಬಹು ಸಂಖ್ಯಾತರಾದ್ರು ಶಕ್ತರಾಗ್ದೆ ಬರಿಗೈಯಾಗೇ ಇರ್ತಾರೆ. ಅಲ್ಪಸಂಖ್ಯಾತರಾಗಿರೋ ಮುಸ್ಲಿಮರು ಆಳೋ ಅವಕಾಶ ಬಂದ್ರೆ ಆಗ ಈ ದೇಶದ ಸಂಸ್ಕೃತಿಯ ನೇತಾರರು ಎಂದು ಬೊಗಳೆ ಹೊಡಿಯೊ ಈ ಹಾರುವರು ಅವ್ರನ್ನೆ ಆಲಂಗಿಸಿಕೊಂಡು ಬಸಿರಾಗ್ತಾರೆ. ಇತಿಹಾಸ ಸರಿಯಾಗಿ ಓದ್ಕೊಂಡೋರಿಗೆ ಗೊತ್ತಾಗುತ್ತೆ, ಶೂದ್ರಮುಂಡೇವು ಆಗಲೂ ಅವರ ಕಾಲಡಿಗೆ ಬಿದ್ದು ಮತ್ತೆ ತುಳಿಸ್ಕೋತಾರೆ.

ಈ ಪುರೋಹಿತಶಾಹಿ – ಅದು ಯಾವ ಮತದ್ದೇ ಆಗಿರಲಿ – ಹಾಗೂ ಬ್ರಾಹ್ಮಣ್ಯಕ್ಕೆ ಮೂಗುದಾರ ಹಾಕಬೇಕಾದರೆ ಮತಾಂತರ ಮಾಡಿದ್ರೆ ಆಗೊಲ್ಲ. ಮೆದುಳಿನಲ್ಡಿ ಬುದ್ಧಿ ಬೆಳೆಸ್ಕೋಬೇಕು; ಎದೆಗಟ್ಟಿ ಮಾಡ್ಕೋಬೇಕು. ರಟ್ಟೆಗಟ್ಟಿ ಜೊತೆ ಬುದ್ಧಿ ಬಲಗೊಂಡರೆ ಮಾತ್ರ ಇಲ್ಲಿ ಮನುಷ್ಯರು ಮನುಷ್ಯರಾಗಿ ಬದುಕೋ ಹಾಗೆ ಮಾಡೋಕೆ ಸಾಧ್ಯ ಆಗ್ತದೆ.

ಮನುಷ್ಯ ಮನುಷ್ಯರಲ್ಲಿ ಜೀವ ಜೀವದ ಭೇದ ಹುಟ್ಟಿ ಹಾಕೋ ಈ ಮತಾನ ಒಮ್ಮೆಲೇ ಓಡಿಸಬೇಕು. ನೋಡಿ ಈ ಜಗತ್ತಿಗೆ ಬಂದ ಜೀವ ತನಗೆ ತಾನೆ ಬೆಳೆದು ಗಟ್ಟಿಯಾಗ್ದೆ ಹೋದ್ರೆ ಅದನ್ನ ಮತ ಮೌಢ್ಯ ಮೆಟ್ಟಿನಿಲ್ತಾವೆ. ಶಕ್ತಿ ಇಲ್ದಿದ್ರೆ ಕಾನೂನು ಕಾಪಾಡೊಲ್ಲ. ಸಾಮಾಜಿಕವಾಗಿ ಮನುಷ್ಯ ಎದುರಿಸುತ್ತಿರುವ ಸಮಸ್ಯೆಗೆ ಮತಾಂತರ ಎಂದೂ ಮದ್ದಾಗಲ್ಲ. ಅದು ತತ್ಕಾಲದ ಬೆದರಿಕೆ ಆಗಬಹುದು. ಮತಾಂತರ ಅನ್ನೋದು, ಹೇಸಿಗೆ ಅಂತ ಒಂದರಿಂದ ಬಿಡಿಸಿಕೊಂಡು ಮತ್ತೊಂದು ಹೇಸಿಗೆಯನ್ನ ಆಲಂಗಿಸಿಕೊಳ್ಳುವುದಷ್ಟೆ. ಅಲ್ಲಿ ಬುದ್ಧಿ ಬೆಳವಣಿಗೆಯ, ವ್ಯಕ್ತಿಯ ಗಟ್ಟಿತನ ವ್ಯಕ್ತವಾಗಲ್ಲ. ಆದ್ದರಿಂದ ಇರುವ ಸ್ಥಿತಿಗೆ ಮೂಲ ಕಂಡುಕೊಂಡು ಅದನ್ನು ತೊಡೆದು ಹಾಕುವ ಮನಸ್ಸಿನ ಬೆಳವಣಿಗೆಯಲ್ಲಿ ನಿಜವಾದ ಪರಿಹಾರ ಕಾಣಬಹುದು. ಸ್ವಶಕ್ತಿ, ಸ್ವಸಾಮರ್ಥ್ಯ ಇರದ ಜನರನ್ನ ಎಲ್ಲಿ ಹೋದರೂ ಗುಲಾಮರನ್ನಾಗಿಯೆ ಉಳಿಸಿಕೊಳ್ಳುವುದು ದುಷ್ಟ ವ್ಯವಸ್ಥೆಯ ಅಂತರಂಗ. ಆದ್ದರಿಂದ ಮತಾಂತರ ಸಮಸ್ಯೆಯ ಪರಿಹಾರವಾಗುವುದಿಲ್ಲ.

*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...