ಮತಾಂತರ – ಒಂದು ಪ್ರತಿಕ್ರಿಯೆ

ಮತಾಂತರ – ಒಂದು ಪ್ರತಿಕ್ರಿಯೆ

ನೋಡಿ, ಮತಾಂತರ ಅನ್ನೋದು- ಆದು ವೈಯಕ್ತಿಕವೋ, ಸಾಮೂಹಿಕವೋ- ಆರೋಗಯಕರ ಅಲ್ಲ. ಮತಾನೇ ತೊಲಗಬೇಕು ಅನ್ನೋ ಈ ವೈಜ್ಞಾನಿಕ ಯುಗದಲ್ಲಿ ನನಗೆ ಇದೊಂದು ಹಾಸ್ಯ.

ಹರಿಜನರು ಮುಸ್ಲಿಮರಾದರೆ ಆರ್. ಎಸ್. ಎಸ್, ಪೇಜಾವರ ಸ್ವಾಮಿಗೆ, ವಿಶ್ವ ಹಿಂದೂ ಪರಿಷತ್ತಿನವರಿಗೆ ತಮ್ಮ ಅಸ್ತಿತ್ವಾನೆ ಹೋದಂಗಾಗ್ತದೆ. ಏಕೆ? ನಿತ್ಯ ಜೀವನದಲ್ಲಿ ಹರಿಜನರ ಸ್ಥಾನಮಾನದ ಬಗ್ಗೆ ತಿರಸ್ಕಾರ ಹೊಂದಿರೊ ಇವರಿಗೆ ಮತಾಂತರದಿಂದ ತಮ್ಮ ಕುಳಿತು ತಿನ್ನುವ ಸ್ಥಿತಿಗೆ ಎಲ್ಲಿ ಧಕ್ಕೆ ಬರುತ್ತೋ ಎನ್ನುವ ಭಯ. ಆದ್ದರಿಂದ ಮೊಗವಾಡ ಹಾಕಿಕೊಂಡು ಭಾರತೀಯ ಸಂಸೃತಿ, ಭಾರತರಾಷ್ಟ್ರ, ಹಿಂದೂರಾಷ್ಟ್ರ ಅಂತ ಏನೋ ಕಂಡು ಬೊಳ್ಳು ಹಾಕೋ ನಾಯಿ ಹಂಗೆ ಬೊಳ್ಳು ಹಾಕ್ತಾರೆ.

ಮತಾಂತರ ಆದಾಗ ಹರಿಜನರು ತಮ್ಮ ಸ್ವಜನ ಬಂಧುಗಳೆ ಎನ್ನುವ ಹುನ್ನಾರದ ನಾಟಕ ಹೂಡೋ ಈ ಜನ ಇಡೀ ಸಮಾಜಕ್ಕಷ್ಟೆ ಅಲ್ಲ, ತಮಗೂ ಮೋಸಮಾಡಿಕೊಂಡು ದಿವಾಳಿಯಾಗ್ತಾರೆ. ದೇಶನ ಹರಾಜು ಹಾಕ್ತಾರೆ. ಕಾಲಕ್ಕೆ ತಕ್ಕ ಹಾಗೆ ಬಣ್ಣ ಬದಲಾಯಿಸೋ ಈ ಗೋಸುಂಬೆತನ ಇದೆಯಲ್ಲ ಅದು ಹೇಸಿಗೆ. ಅದಕ್ಕೂ ಹೆಚ್ಚಿನ ಹೇಸಿಗೆ ಅಂದ್ರೆ ಮತಾಂತರವ ಬಗ್ಗೆ ಮೌನವಾಗಿರೋ ಮುಸ್ಲಿಮರು, ಹಾಗೇ ಕ್ರಮೇಣ ಕೊಲ್ಲುವ ಕ್ರಿಶ್ಚಿಯನ್ನರು.

ಮತಾಂತರದ ಪರಿಣಾಮ ಏನು ಗೊತ್ತೆ? ಶೂದ್ರ ಜನಾಂಗ ಬಹು ಸಂಖ್ಯಾತರಾದ್ರು ಶಕ್ತರಾಗ್ದೆ ಬರಿಗೈಯಾಗೇ ಇರ್ತಾರೆ. ಅಲ್ಪಸಂಖ್ಯಾತರಾಗಿರೋ ಮುಸ್ಲಿಮರು ಆಳೋ ಅವಕಾಶ ಬಂದ್ರೆ ಆಗ ಈ ದೇಶದ ಸಂಸ್ಕೃತಿಯ ನೇತಾರರು ಎಂದು ಬೊಗಳೆ ಹೊಡಿಯೊ ಈ ಹಾರುವರು ಅವ್ರನ್ನೆ ಆಲಂಗಿಸಿಕೊಂಡು ಬಸಿರಾಗ್ತಾರೆ. ಇತಿಹಾಸ ಸರಿಯಾಗಿ ಓದ್ಕೊಂಡೋರಿಗೆ ಗೊತ್ತಾಗುತ್ತೆ, ಶೂದ್ರಮುಂಡೇವು ಆಗಲೂ ಅವರ ಕಾಲಡಿಗೆ ಬಿದ್ದು ಮತ್ತೆ ತುಳಿಸ್ಕೋತಾರೆ.

ಈ ಪುರೋಹಿತಶಾಹಿ – ಅದು ಯಾವ ಮತದ್ದೇ ಆಗಿರಲಿ – ಹಾಗೂ ಬ್ರಾಹ್ಮಣ್ಯಕ್ಕೆ ಮೂಗುದಾರ ಹಾಕಬೇಕಾದರೆ ಮತಾಂತರ ಮಾಡಿದ್ರೆ ಆಗೊಲ್ಲ. ಮೆದುಳಿನಲ್ಡಿ ಬುದ್ಧಿ ಬೆಳೆಸ್ಕೋಬೇಕು; ಎದೆಗಟ್ಟಿ ಮಾಡ್ಕೋಬೇಕು. ರಟ್ಟೆಗಟ್ಟಿ ಜೊತೆ ಬುದ್ಧಿ ಬಲಗೊಂಡರೆ ಮಾತ್ರ ಇಲ್ಲಿ ಮನುಷ್ಯರು ಮನುಷ್ಯರಾಗಿ ಬದುಕೋ ಹಾಗೆ ಮಾಡೋಕೆ ಸಾಧ್ಯ ಆಗ್ತದೆ.

ಮನುಷ್ಯ ಮನುಷ್ಯರಲ್ಲಿ ಜೀವ ಜೀವದ ಭೇದ ಹುಟ್ಟಿ ಹಾಕೋ ಈ ಮತಾನ ಒಮ್ಮೆಲೇ ಓಡಿಸಬೇಕು. ನೋಡಿ ಈ ಜಗತ್ತಿಗೆ ಬಂದ ಜೀವ ತನಗೆ ತಾನೆ ಬೆಳೆದು ಗಟ್ಟಿಯಾಗ್ದೆ ಹೋದ್ರೆ ಅದನ್ನ ಮತ ಮೌಢ್ಯ ಮೆಟ್ಟಿನಿಲ್ತಾವೆ. ಶಕ್ತಿ ಇಲ್ದಿದ್ರೆ ಕಾನೂನು ಕಾಪಾಡೊಲ್ಲ. ಸಾಮಾಜಿಕವಾಗಿ ಮನುಷ್ಯ ಎದುರಿಸುತ್ತಿರುವ ಸಮಸ್ಯೆಗೆ ಮತಾಂತರ ಎಂದೂ ಮದ್ದಾಗಲ್ಲ. ಅದು ತತ್ಕಾಲದ ಬೆದರಿಕೆ ಆಗಬಹುದು. ಮತಾಂತರ ಅನ್ನೋದು, ಹೇಸಿಗೆ ಅಂತ ಒಂದರಿಂದ ಬಿಡಿಸಿಕೊಂಡು ಮತ್ತೊಂದು ಹೇಸಿಗೆಯನ್ನ ಆಲಂಗಿಸಿಕೊಳ್ಳುವುದಷ್ಟೆ. ಅಲ್ಲಿ ಬುದ್ಧಿ ಬೆಳವಣಿಗೆಯ, ವ್ಯಕ್ತಿಯ ಗಟ್ಟಿತನ ವ್ಯಕ್ತವಾಗಲ್ಲ. ಆದ್ದರಿಂದ ಇರುವ ಸ್ಥಿತಿಗೆ ಮೂಲ ಕಂಡುಕೊಂಡು ಅದನ್ನು ತೊಡೆದು ಹಾಕುವ ಮನಸ್ಸಿನ ಬೆಳವಣಿಗೆಯಲ್ಲಿ ನಿಜವಾದ ಪರಿಹಾರ ಕಾಣಬಹುದು. ಸ್ವಶಕ್ತಿ, ಸ್ವಸಾಮರ್ಥ್ಯ ಇರದ ಜನರನ್ನ ಎಲ್ಲಿ ಹೋದರೂ ಗುಲಾಮರನ್ನಾಗಿಯೆ ಉಳಿಸಿಕೊಳ್ಳುವುದು ದುಷ್ಟ ವ್ಯವಸ್ಥೆಯ ಅಂತರಂಗ. ಆದ್ದರಿಂದ ಮತಾಂತರ ಸಮಸ್ಯೆಯ ಪರಿಹಾರವಾಗುವುದಿಲ್ಲ.

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಕ್ಷಯ
Next post ಮನವೆಂಬ ಮನೆಯಲ್ಲಿ

ಸಣ್ಣ ಕತೆ

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…