Home / ಕವನ / ಕವಿತೆ / ಪದಗಳೊಂದಿಗೆ ನಾನು

ಪದಗಳೊಂದಿಗೆ ನಾನು

ಪದಗಳೆಂದರೆ ನನಗೆ ಅಚ್ಚುಮೆಚ್ಚು
ದಿನಂಪ್ರತಿಯ ಅಭ್ಯಾಸವೂ
ಪದಗಳ ಹೊಸೆಯುವುದರಲ್ಲಿ,
ಮಸೆಯುವುದರಲ್ಲಿ:
ಆದರೆ ಆ ಪದಗಳಿಗೆ ಶಬ್ದಕೋಶದಿ
ಅರ್ಥಗಳ ಹುಡುಕಿ ಸೋತಿದ್ದೇನೆ.

ಹೊಸ ಹಾಡಿಗೆ ಕುಣಿದಾಡುವ
ನವಿಲುಗಳ ದಾರಿ ಕಾಯುತ್ತ,
ನಾನೇ ನವಿಲಾಗಬಯಸುತ್ತೇನೆ.
ಮತ್ತೆ ಕುಕಿಲದ ಗಾನಕ್ಕೆ ಪದ ಜೋಡಿಸಿ
ಶ್ರುತಿ ಕೂಡಿಸಿ ಹಾಡಾಗ ಬಯಸುತ್ತೇನೆ.

ಪದಗಳು ಪರಾರಿಯಾಗುತ್ತವೆ
ಆಗೊಮ್ಮೆ ಈಗೊಮ್ಮೆ ಸುಳಿವುಕೊಡದೆ,
ಪಕ್ಕಾ ಪರದೇಶಿಯಂತೆ.
ಹಳಹಳಿಸಿ ನೋಡುತ್ತೇನೆ:
ಪದಗಳ ಜೋಡಿಸಿ ಇಡಲಾಗದ್ದಕ್ಕೆ.

ನಡುರಾತ್ರಿಯಲ್ಲಿ ಕಂದೀಲ ಬೆಳಕಿನಲ್ಲಿ
ನಡಗುವ ಕೈಗಳು
ಆಡಿಯಾಡುತ್ತವೆ ಕೆತ್ತಿದ ಪದಗಳ ಮೇಲೆ,
ಕಂಗಳಿಂದ ಉದುರಿದ ಮುತ್ತೊಂದು
ಕರ ಸೋಕಿದಾಗ ಎಚ್ಚರ ಗೊಳ್ಳುತ್ತವೆ ಪದಗಳು,
ಸಡಿಲವಾಗಿಲ್ಲ ಎಲ್ಲಪದಗಳು
ಅವಕ್ಕೆ ಸಂದೂಕದ ಪೆಟ್ಟಿಗೆಯಲ್ಲಿಟ್ಟು
ಕಾಪಿಡು ಎನ್ನುತ್ತದೆ ಮನಸ್ಸು.

ಪದಗಳೆಂದರೆ ನನಗೆ ಅಲರ್ಜಿ
ನನ್ನೊಳಗಿನ ನನ್ನನ್ನು
ಹೊರಗಟ್ಟಿ ಅಣಕಿಸಿ ನಗುತ್ತವೆ.
ಹಾಡಾಗುವ ಬದಲು ಹಾವಾಗಿ
ಹಗೆಯ ಹೊಗೆ ಹಬ್ಬಿಸುತ್ತವೆ

ಪದಗಳೆಂದರೆ ನನಗೆ ಅಲರ್ಜಿ
ಪಟ್ಟಾಂಗದಲ್ಲಿ ಪದಗಳ ಭರ್ಜರಿ
ಬೇಟೆಯಾಡುವ ನಾನು
ಕಾರ್ಯಹೀನ ಕೆಲಸಗೇಡಿಯಾಗುತ್ತೇನೆ.

ಪದಗಳೆಂದರೆ ಅಚ್ಚುಮೆಚ್ಚು ಅಲರ್ಜಿ ನನಗೆ
ಪರಪರನೆ ಕೆರೆದುಕೊಳ್ಳುವ ಚಟವಿದ್ದ ಹಾಗೆ.
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...