Home / ಕವನ / ಕವಿತೆ / ಪದಗಳೊಂದಿಗೆ ನಾನು

ಪದಗಳೊಂದಿಗೆ ನಾನು

ಪದಗಳೆಂದರೆ ನನಗೆ ಅಚ್ಚುಮೆಚ್ಚು
ದಿನಂಪ್ರತಿಯ ಅಭ್ಯಾಸವೂ
ಪದಗಳ ಹೊಸೆಯುವುದರಲ್ಲಿ,
ಮಸೆಯುವುದರಲ್ಲಿ:
ಆದರೆ ಆ ಪದಗಳಿಗೆ ಶಬ್ದಕೋಶದಿ
ಅರ್ಥಗಳ ಹುಡುಕಿ ಸೋತಿದ್ದೇನೆ.

ಹೊಸ ಹಾಡಿಗೆ ಕುಣಿದಾಡುವ
ನವಿಲುಗಳ ದಾರಿ ಕಾಯುತ್ತ,
ನಾನೇ ನವಿಲಾಗಬಯಸುತ್ತೇನೆ.
ಮತ್ತೆ ಕುಕಿಲದ ಗಾನಕ್ಕೆ ಪದ ಜೋಡಿಸಿ
ಶ್ರುತಿ ಕೂಡಿಸಿ ಹಾಡಾಗ ಬಯಸುತ್ತೇನೆ.

ಪದಗಳು ಪರಾರಿಯಾಗುತ್ತವೆ
ಆಗೊಮ್ಮೆ ಈಗೊಮ್ಮೆ ಸುಳಿವುಕೊಡದೆ,
ಪಕ್ಕಾ ಪರದೇಶಿಯಂತೆ.
ಹಳಹಳಿಸಿ ನೋಡುತ್ತೇನೆ:
ಪದಗಳ ಜೋಡಿಸಿ ಇಡಲಾಗದ್ದಕ್ಕೆ.

ನಡುರಾತ್ರಿಯಲ್ಲಿ ಕಂದೀಲ ಬೆಳಕಿನಲ್ಲಿ
ನಡಗುವ ಕೈಗಳು
ಆಡಿಯಾಡುತ್ತವೆ ಕೆತ್ತಿದ ಪದಗಳ ಮೇಲೆ,
ಕಂಗಳಿಂದ ಉದುರಿದ ಮುತ್ತೊಂದು
ಕರ ಸೋಕಿದಾಗ ಎಚ್ಚರ ಗೊಳ್ಳುತ್ತವೆ ಪದಗಳು,
ಸಡಿಲವಾಗಿಲ್ಲ ಎಲ್ಲಪದಗಳು
ಅವಕ್ಕೆ ಸಂದೂಕದ ಪೆಟ್ಟಿಗೆಯಲ್ಲಿಟ್ಟು
ಕಾಪಿಡು ಎನ್ನುತ್ತದೆ ಮನಸ್ಸು.

ಪದಗಳೆಂದರೆ ನನಗೆ ಅಲರ್ಜಿ
ನನ್ನೊಳಗಿನ ನನ್ನನ್ನು
ಹೊರಗಟ್ಟಿ ಅಣಕಿಸಿ ನಗುತ್ತವೆ.
ಹಾಡಾಗುವ ಬದಲು ಹಾವಾಗಿ
ಹಗೆಯ ಹೊಗೆ ಹಬ್ಬಿಸುತ್ತವೆ

ಪದಗಳೆಂದರೆ ನನಗೆ ಅಲರ್ಜಿ
ಪಟ್ಟಾಂಗದಲ್ಲಿ ಪದಗಳ ಭರ್ಜರಿ
ಬೇಟೆಯಾಡುವ ನಾನು
ಕಾರ್ಯಹೀನ ಕೆಲಸಗೇಡಿಯಾಗುತ್ತೇನೆ.

ಪದಗಳೆಂದರೆ ಅಚ್ಚುಮೆಚ್ಚು ಅಲರ್ಜಿ ನನಗೆ
ಪರಪರನೆ ಕೆರೆದುಕೊಳ್ಳುವ ಚಟವಿದ್ದ ಹಾಗೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...