Home / ಕವನ / ಕವಿತೆ / ಪದಗಳೊಂದಿಗೆ ನಾನು

ಪದಗಳೊಂದಿಗೆ ನಾನು

ಪದಗಳೆಂದರೆ ನನಗೆ ಅಚ್ಚುಮೆಚ್ಚು
ದಿನಂಪ್ರತಿಯ ಅಭ್ಯಾಸವೂ
ಪದಗಳ ಹೊಸೆಯುವುದರಲ್ಲಿ,
ಮಸೆಯುವುದರಲ್ಲಿ:
ಆದರೆ ಆ ಪದಗಳಿಗೆ ಶಬ್ದಕೋಶದಿ
ಅರ್ಥಗಳ ಹುಡುಕಿ ಸೋತಿದ್ದೇನೆ.

ಹೊಸ ಹಾಡಿಗೆ ಕುಣಿದಾಡುವ
ನವಿಲುಗಳ ದಾರಿ ಕಾಯುತ್ತ,
ನಾನೇ ನವಿಲಾಗಬಯಸುತ್ತೇನೆ.
ಮತ್ತೆ ಕುಕಿಲದ ಗಾನಕ್ಕೆ ಪದ ಜೋಡಿಸಿ
ಶ್ರುತಿ ಕೂಡಿಸಿ ಹಾಡಾಗ ಬಯಸುತ್ತೇನೆ.

ಪದಗಳು ಪರಾರಿಯಾಗುತ್ತವೆ
ಆಗೊಮ್ಮೆ ಈಗೊಮ್ಮೆ ಸುಳಿವುಕೊಡದೆ,
ಪಕ್ಕಾ ಪರದೇಶಿಯಂತೆ.
ಹಳಹಳಿಸಿ ನೋಡುತ್ತೇನೆ:
ಪದಗಳ ಜೋಡಿಸಿ ಇಡಲಾಗದ್ದಕ್ಕೆ.

ನಡುರಾತ್ರಿಯಲ್ಲಿ ಕಂದೀಲ ಬೆಳಕಿನಲ್ಲಿ
ನಡಗುವ ಕೈಗಳು
ಆಡಿಯಾಡುತ್ತವೆ ಕೆತ್ತಿದ ಪದಗಳ ಮೇಲೆ,
ಕಂಗಳಿಂದ ಉದುರಿದ ಮುತ್ತೊಂದು
ಕರ ಸೋಕಿದಾಗ ಎಚ್ಚರ ಗೊಳ್ಳುತ್ತವೆ ಪದಗಳು,
ಸಡಿಲವಾಗಿಲ್ಲ ಎಲ್ಲಪದಗಳು
ಅವಕ್ಕೆ ಸಂದೂಕದ ಪೆಟ್ಟಿಗೆಯಲ್ಲಿಟ್ಟು
ಕಾಪಿಡು ಎನ್ನುತ್ತದೆ ಮನಸ್ಸು.

ಪದಗಳೆಂದರೆ ನನಗೆ ಅಲರ್ಜಿ
ನನ್ನೊಳಗಿನ ನನ್ನನ್ನು
ಹೊರಗಟ್ಟಿ ಅಣಕಿಸಿ ನಗುತ್ತವೆ.
ಹಾಡಾಗುವ ಬದಲು ಹಾವಾಗಿ
ಹಗೆಯ ಹೊಗೆ ಹಬ್ಬಿಸುತ್ತವೆ

ಪದಗಳೆಂದರೆ ನನಗೆ ಅಲರ್ಜಿ
ಪಟ್ಟಾಂಗದಲ್ಲಿ ಪದಗಳ ಭರ್ಜರಿ
ಬೇಟೆಯಾಡುವ ನಾನು
ಕಾರ್ಯಹೀನ ಕೆಲಸಗೇಡಿಯಾಗುತ್ತೇನೆ.

ಪದಗಳೆಂದರೆ ಅಚ್ಚುಮೆಚ್ಚು ಅಲರ್ಜಿ ನನಗೆ
ಪರಪರನೆ ಕೆರೆದುಕೊಳ್ಳುವ ಚಟವಿದ್ದ ಹಾಗೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...