ಹಗಲು ದರೋಡೆ

ಯಾವ ಅಂಜಿಕೆಯೂ
ಈ ಪ್ರಾಣಿಗಿಲ್ಲ
ಮಾನವರ ಸರಿಸಮರು
ಕ್ರೂರ ಜಂತುವು ಇಲ್ಲ,
ಮಸಣದಲೂ ಮನೆಯ
ಕಟ್ಟಿಹನು ನೋಡ,
ದೆವ್ವಗಳೇ ನರ ಬಡಿದು
ಕುಂತಿಹವು ನೋಡ

ರೀತಿ ನೀತಿಗಳ ತತ್ವ
ತಂದವನು ಅವನೆ
ನೀತಿ ನಿಯಮಗಳ ಮೀರಿ
ಬೆಳೆದವನು ಅವನೇ
ಆಷಾಢಭೂತಿಗಳು
ಅರಸು ಮಕ್ಕಳ ಹಾಗೆ,
ಆಚಾರ ವಿಚಾರಗಳು
ಹಗಲು ವೇಷದ ಹಾಗೆ:

ಧರ್ಮಮರ್ಮ ವ್ಯಾಖ್ಯಾನ
ಸೊಗಸು ಉಪಾಖ್ಯಾನ
ರಂಗಮಂಚದಿ ಭಾಷ್ಯ
ಪರದೆ ಹಿಂದಿದೆ ಲಾಸ್ಯ
ಸೃಷ್ಠಿಯಲಿ ಹಿರಿತನವು
ಬುದ್ಧಿಮತ್ತೆಯ ವರವು
ಆದರೂ ಮತಿಗೇಡು,
ಬದುಕು ಬರಿಕೊರಡು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಯಕ್ಷಗಾನ
Next post ಸಂತಂಮಣ್ಣ

ಸಣ್ಣ ಕತೆ

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

cheap jordans|wholesale air max|wholesale jordans|wholesale jewelry|wholesale jerseys