ಐ‌ಎಸ್ ಐಎಸ್

ಅಲ್ಲಿ ನೆತ್ತರಿನ ಸ್ನಾನ
ಮಾಂಸದಂಗಡಿಯೇ ಪುಣ್ಯಸ್ಥಾನ
ಕೈಯಲ್ಲಿ ಕೋವಿ ಕರದ ಆಭರಣ

ವ್ಯತಿರಿಕ್ತ ವ್ಯಾಖ್ಯಾನ
ಧರ್ಮಕ್ಕೆ ನೀಡುವರು
ಕುಲಬಂಧು ಬಾಂಧವರ
ಕೊಚ್ಚಿ ಕೆಡವಿಹರು
ಅವರು ಬೀಜಾಸುರರೇ
ಇಲ್ಲ ರಕ್ತ ಪಿಪಾಸುಗಳೇ
ತಿಗಣಿ, ಸೊಳ್ಳೆ ಉಂಬಳಿಗಿಂತ
ನೇಚ್ಯ ಆದೀಮರೇ

ತಾಯ್ಮೊಲೆಯ ಅಮೃತವ
ಸವಿದಿಲ್ಲ ಖಳರು
ಹರಿಸುತಿಹರೇನದಕೆ ರುಧಿರ ಧಾರೆ?
ನೂರರಂತೆರಡು ಸ್ನಾಯುಗಳ
ಆಕುಂಚಿಸಿ ಪಡೆದ ಮಗನ ಕೊಂದು
ಹೆತ್ತ ಹೊಟ್ಟೆಗೆ ಮಾಂಸ ಉಣಬಡಿಸಿ
ಉಸುರಿದರು ನೀ ಮಗನ ತಿಂದೆ
ಎಂಥಾ ಮಹಾ ತಾಯಿ ಎಂದೆ?
ಧರ್ಮಾಂಧ ರಕ್ಕಸರು
ಏರಿ ಬರುತಿಹರು
ಐ ಎಸ್ ಐ ಎಸ್ ಅಂತಕರು
ಜಗತ್ ವಿಧ್ವಂಷಕರು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಂತೆ
Next post ಶಬರಿ – ೭

ಸಣ್ಣ ಕತೆ

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

cheap jordans|wholesale air max|wholesale jordans|wholesale jewelry|wholesale jerseys