Home / ಕವನ / ಕವಿತೆ / ಗಾರೆಗಲ್ಲಿನ ಕಿಟಕಿ ಮತ್ತು ಮೃದು ಹಸ್ತ

ಗಾರೆಗಲ್ಲಿನ ಕಿಟಕಿ ಮತ್ತು ಮೃದು ಹಸ್ತ

ತೂತುಗಳನ್ನೆ ಹೊದ್ದ
ಗಾರೆಗಲ್ಲಿನ ಬಂಧಿಖಾನೆಗೂ
ಕಳೆಕಟ್ಟಿದೆ.
ಮೃದು ಮಧುರ ಹಸ್ತವೊಂದರ
ಇರುವು

ನಿರ್ಜೀವ ವಸ್ತುವೊಂದನ್ನು ಜೋಪಾನ
ಮಾಡಿದ ಆನಂದ
ಕಟಕಟೆಯ ಗೋಡೆಗೆ.

ನಿರ್ಜೀವತೆಗೂ ಜೀವ
ಭಾವವ ಬೆಸೆದ ಹುರುಪು
ಹಸ್ತಕ್ಕೆ. ಕಲ್ಪನೆಯ
ವ್ಯಾಪ್ತಿ ಸೀಮಾತೀತ.
ಬಂಧನದ ನಡುವೆಯೇ
ಜಗವನ್ನೆ ಗೆಲ್ಲುವ ಜಾಣತನ.

ಅಂದುಕೊಂಡಿದೆ ಕಲ್ಲಿನ ಗೋಡೆ
ಕೋಮಲ ಕೈಗೆ ಎಲ್ಲಿದೆ
ಕಲ್ಲನ್ನು ಗುದ್ದುವ ಪುಡಿ ಮಾಡುವ
ಗತ್ತು ಗೈರತ್ತು.

ಅದರೆ ಆ ಹಸ್ತಕ್ಕೆ ಗೊತ್ತು
ತನ್ನದೊಂದು ಮುಷ್ಟಿ ಪ್ರೀತಿ ಸಾಕು
ಕಲ್ಲಿನ ಮುಷ್ಟಿಯಗಲದ
ಹೃದಯ ಘಾಸಿಗೊಳ್ಳಲು
ಚಿಂದಿಚಿಂದಿಯಾಗಲು,
ಮತ್ತೆಂದು ಗಾರೆಗಲ್ಲು ಕುತಂತ್ರದ
ಕಾಳಜಿ ಪ್ರದರ್ಶಿಸುವ
ಗೋಡೆಯಾಗದೇ.
ತನ್ನ ಮೃದು ಹಸ್ತಕ್ಕೆ ಮದರಂಗಿಯಾಗಿ
ಬರಬಲ್ಲದೆಂದು.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...