Home / ಕವನ / ಕವಿತೆ / ವೇಮುಲನಿಗೊಂದು ಪ್ರಶ್ನೆ

ವೇಮುಲನಿಗೊಂದು ಪ್ರಶ್ನೆ

ಜಗದೊಳಗೆ ಹುಟ್ಟಿಬೆಳೆದರೂ
ಜನರೊಳಗೆ ಬೆಳೆಯುವುದೇ ಸಾಧನೆ ವೇಮುಲ.

ಇಲ್ಲದ ಮೂಲದಲ್ಲೇ ಹುಟ್ಟಿದರೂ
ಇಲಾಖೆಗಳನ್ನೇ ಕಟ್ಟಬಲ್ಲವರು ಇಲ್ಲಿಹರು
ಇದ್ದರಮನೆಯ ಮಾರಿ ತಿಂದವರು ಇಹರು
ಪರಿಪರಿಯ ಪಂಡಿತರು, ಪಾಮರರು,
ಅರೆಬರೆಯ ಶಿಕ್ಷಿತರು ಎಲ್ಲರ ಗೂಡಲ್ಲವೇ ಇದು
ನಮ್ಮತನದ ಮೂಲ ಮಂತ್ರ. ವಿವಿಧತೆಯಲ್ಲಿ ಏಕತೆ
ರಾಷ್ಟ್ರ ಭಾವೈಕ್ಯತೆ
ಅಂಬೇಡ್ಕರ ನನಸಾದ ಕನಸಲ್ಲವೇ ಸಂವಿಧಾನ

ಓದಿಕೊಂಡಿರಲಿಲ್ಲವೇ ವೇಮುಲ
ನೀನು ಬಾಬಾ ಸಾಹೇಬರ?
ಓದಿದಿದ್ದರೆ ಓಡಿಹೋಗುತ್ತಿರಲಿಲ್ಲ
ಹೀಗೆ ಹೇಡಿಯಾಗಿ.
ಹೆತ್ತ ಹೊಟ್ಟೆಗೆ ಉರಿ‌ಅಟ್ಟಿ
ಬೇಯಿಸಿಕೊಳ್ಳುವುದಾದರೂ
ಏನಿತ್ತು ನಿನಗೆ?
ಹೆಸರಿಗಷ್ಟೇ ನೀನು ಹೋರಾಟಗಾರ ಅಂಬೇಡ್ಕರರಂತೆ ಎನಿಸಿಕೊಂಡೆ.
ಅವರ ನೋವಿನ ಹನಿ ರವವಷ್ಟೇ ಇರಬೇಕು
ನಿನಗೆ ತಗುಲಿದ ನೋವು
ಇರಲಿಲ್ಲ ಬಿಡು ನಿನ್ನಲ್ಲಿ ತಾಳಿಕೊಳ್ಳುವ
ತಾಕತ್ತು, ಅಪಮಾನ ಗೆಲ್ಲುವ ಗತ್ತು
ಇದ್ದರೆ ನೀನು ಮತ್ತೊಬ್ಬ ಬಾಬಾಸಾಹೇಬ ಆಗುತ್ತಿದ್ದೆ.
ಕೂಳನ್ನು ಕಸಿದುಕೊಂಡರಲ್ಲವೇ ಅವರು
ಅಸ್ಪೃಶ್ಯನೆಂದು ಕಪ್ಪು ಪಟ್ಟಿಯ ಸಿದ್ಧ ಮಾಡಿದರೆಂದೆ.
ಇತ್ತಿದ್ದರು ನೆಲೆ ನೀನು ಈ ನೆಲದ ಕುಡಿಯೆಂದು
ನಾಡ ಬೀಜವೆಂದು. ಉಗ್ರನಲ್ಲವೆಂದು
ವ್ಯಗ್ರನಾಗನೆಂದು.
ಹೊಟ್ಟೆಗೆ ಹಿಟ್ಟಿಲ್ಲದ ಹಟ್ಟಿಯಲ್ಲಿ ಹುಟ್ಟಿದೆ ನೀನು
ಹೋರಾಟದ ಬಿಂಬವ ಎದೆಯೊಳಗಿಟ್ಟುಕೊಂಡು
ತಣ್ಣೀರ ಬಟ್ಟೆ ಹೊಟ್ಟೆಗಿಟ್ಟು
ನಿನ್ನ ಮೆದುಳ ಪುಷ್ಟಿಗೊಳಿಸಬೇಕೆಂದರು ನಿನ್ನ
ಒಡಲಲ್ಲಿ ಹೊತ್ತವರು
ಅಡ್ಡಕಸುಬಿಗಳಿಗೆ ಅನುಯಾಯಿಯಾದೆ ನೀನು
ದೇಶ ಭಕ್ತಿಯ ಕುಡಿಗಳು ನೀವು
ದುಷ್ಟಸರ್ಪಗಳಿಗೇಕೆ ಹಾಲೆರೆದಿರಿ?
ಬದುಕಿದ್ದರೆ ಉತ್ತರಿಸುತ್ತಿದ್ದೆಯಾ?
ಅಥವಾ ಸರ್ಪಸಂಕುಲಕ್ಕೆ ಹಾಸುಗಂಬಳಿಯಾಗುತ್ತಿದ್ದೆಯಾ?
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...